ಸರ್ಕಾರದ ಆದೇಶಗಳನ್ನು ಪಾಲಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಗಂಗಾವತಿ : ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಸದಸ್ಯರು ಕಾರ್ಮಿಕ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಪಾಲಿಸುವಂತೆ ಒತ್ತಾಯಿಸಿ ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್ ನೀರಾವರಿ ಇಲಾಖೆ ಮುಂದೆ ಮೇ 4ರಂದು ಪ್ರತಿಭಟನೆ ನಡೆಸಿದರು. ಸರ್ಕಾರ

ಎಐಸಿಸಿಟಿಯು ಜಿಲ್ಲಾ ಸಮಿತಿ ಪದಾಧಿಕಾರಿಗಳೊಂದಿಗೆ ಪ್ರತಿಭಟಿಸಿದ ಸಮಿತಿ ಸದಸ್ಯರು, ಆದೇಶಗಳನ್ನು ಪಾಲಿಸಿ, ಇಲ್ಲವೇ ಲಿಖಿತ ಉತ್ತರ ನೀಡುವಂತೆ ಒತ್ತಾಯಿಸಿದರು.

ಸಂಘದ ತಾಲೂಕು ಅಧ್ಯಕ್ಷ ಕೆ.ನಾಗಲಿಂಗಸ್ವಾಮಿ ಮಾತನಾಡಿ, ಕಾರ್ಮಿಕರ ಬಾಕಿ ವೇತನ ಪಾವತಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಕಾರ್ಮಿಕ ನ್ಯಾಯಾಲಯದ ಆದೇಶಗಳನ್ನು ಇದುವರೆಗೂ ಪಾಲಿಸಿಲ್ಲ.

ಇದನ್ನೂ ಓದಿ: ವಿಧಾನಸಭಾ ಚುನಾವಣೆಗಳ ಫಲಿತಾಂಶಗಳು ಜಾತ್ಯತೀತ, ಪ್ರಗತಿಪರ ಮತ್ತು ಪ್ರಜಾಪ್ರಭುತ್ವ ಶಕ್ತಿಗಳಿಗೆ ಕಳವಳಕಾರಿ: ಎಂ ಎ ಬೇಬಿ

ನೀರಾವರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಉದ್ಯೋಗ ಭದ್ರತೆಯಿಲ್ಲದಂತಾಗಿದ್ದು, ನಾಲ್ಕು ತಿಂಗಳ ವೇತನ ಸಿಕ್ಕಿಲ್ಲ. ಹಲವು ಬಾರಿ ಆಯೋಜಿಸಿದ್ದ ಸಂಧಾನ ಸಭೆ ಹಾಗೂ ಕಾರ್ಮಿಕ ಇಲಾಖೆಯ ಮುಂದಾಳತ್ವದಲ್ಲಿ ತೆಗೆದುಕೊಳ್ಳಲಾದ ನಿರ್ಧಾರಗಳನ್ನು ಜಾರಿಗೊಳಿಸಿಲ್ಲ.

ಇದರಿಂದ ಕಾರ್ಮಿಕರು ಸಂಕಷ್ಟಕ್ಕೊಳಗಾಗಿದ್ದಾರೆ. ಉದ್ಯೋಗ ಭದ್ರತೆ, ಕನಿಷ್ಠ ವೇತನ, ಇಎಸ್‌ಐ, ಪಿಎ ಸೇರಿ ಕಾನೂನುಬದ್ಧ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು.

ಪದಾಧಿಕಾರಿಗಳಾದ ಶರಣಬಸವ ಹೇರೂರು, ಹುಚ್ಚಯ್ಯ ಸ್ವಾಮಿ, ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿಜಯ್ ದೊರೆರಾಜು ಮಾತನಾಡಿದರು.

ಇದನ್ನೂ ನೋಡಿ: “ಮೇ ದಿನದ ಇತಿಹಾಸ: 8 ಗಂಟೆ ಕೆಲಸದ ಹಕ್ಕು ಹೇಗೆ ಬಂದಿತು?” JanashakthiMedia

Donate Janashakthi Media

Leave a Reply

Your email address will not be published. Required fields are marked *