ಗೌರಿಬಿದನೂರು| ಅಂಗನವಾಡಿಗಳಲ್ಲಿ ಎಲ್‌ಕೆಜಿ – ಯುಕೆಜಿ ಪ್ರಾರಂಭ ಮಾಡಿ: ಪ್ರತಿಭಟನೆ

ಗೌರಿಬಿದನೂರು: ಮಾರ್ಚ್‌ 14ರಂದು ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭ ಮಾಡಲು ವಿಧಾನಸಭೆಯಲ್ಲಿ ಚರ್ಚೆ ಮಾಡಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಶಾಸಕರ ಗೃಹ ಕಚೇರಿ ಎದುರು ತಾಲ್ಲೂಕಿನ ಪ್ರತಿಭಟನೆ ನಡೆಸಿದರು. ಗೌರಿಬಿದನೂರು

ತಾಲ್ಲೂಕು ಪಂಚಾಯಿತಿ ಆವರಣದಿಂದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಕಾಲ್ನಡಿಗೆ ಮೂಲಕ ಶಾಸಕರ ಗೃಹ ಕಚೇರಿ ತಲುಪಿದರು.

ಬಳಿಕ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿದ್ದಗಂಗಪ್ಪ ಮಾತನಾಡಿ, ರಾಜ್ಯದ 224 ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭ ಮಾಡಲು ಸಿದ್ಧತೆ ನಡೆಸಿದೆ. ಇದರ ಬದಲಾಗಿ ಅಂಗನವಾಡಿ ಶಾಲೆಗಳಲ್ಲಿ ಇದನ್ನು ಪ್ರಾರಂಭ ಮಾಡಿದರೆ ಎಲ್ಲಾ ಅಂಗನವಾಡಿಗಳಿಗೂ ಅನುಕೂಲವಾಗುತ್ತದೆ ಎಂದರು.

ಇದನ್ನೂ ಓದಿ: ಹಕ್ಕುಗಳಿಗಾಗಿ ಮಹಿಳೆಯರು ಸಂಘಟಿತ ಹೋರಾಟ ಮಾಡಬೇಕು -ದೇವಿ

ರಾಜ್ಯದಲ್ಲಿ ಖಾಸಗಿ ಶಾಲೆಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಶಿಕ್ಷಣದ ಹೆಸರಿನಲ್ಲಿ ಲೂಟಿ ಮಾಡುತ್ತಿವೆ. ಇದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಬಹಳಷ್ಟು ವರ್ಷಗಳಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಪ್ರಾರಂಭ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದೇವೆ.
ಇದರ ಸಾಧಕ ಬಾಧಕಗಳ ಬಗ್ಗೆ ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ವಿಧಾನ ಸಭೆಯಲ್ಲಿ ಚರ್ಚೆ ಮಾಡಬೇಕು ಎಂದು ತಿಳಿಸಿದರು.

ಸಿಪಿಎಂ ತಾಲ್ಲೂಕು ಅಧ್ಯಕ್ಷ ಬಿ.ಕೆ.ಬಾಬುರೆಡ್ಡಿ ಮಾತನಾಡಿ, ಸರ್ಕಾರವು ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂಬ ತೀರ್ಮಾನ ವಿರೋಧಿಸಿ ಶಾಸಕರ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದ್ದು ಎಲ್‌ಕೆಜಿ ಹಾಗೂ ಯುಕೆಜಿ ಅಂಗನವಾಡಿಗಳಲ್ಲಿ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಮಾರ್ಚ್ 23ರಂದು ರಾಜ್ಯ ಮಟ್ಟದಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ಅಧ್ಯಕ್ಷೆ ಜಯಮಂಗಳಮ್ಮ, ಕಾರ್ಯದರ್ಶಿ ವೆಂಕಟಲಕ್ಷ್ಮಮ್ಮ, ಖಜಾಂಚಿ ರಾಧಮ್ಮ, ಸರಸ್ವತಮ್ಮ, ವಸಂತಲಕ್ಷ್ಮಿ, ಸುಗುಣ, ರಾಮಲಕ್ಷ್ಮಮ್ಮ, ಅಂಗನವಾಡಿ ಕೇಂದ್ರಗಳ ಶಿಕ್ಷಕಿಯರು ಮತ್ತು ಸಹಾಯಕಿಯರು ಭಾಗವಹಿಸಿದ್ದರು.

ಇದನ್ನೂ ನೋಡಿ: ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆಗೆ ಖಂಡನೆ: ಸೌದೆ ಒಲೆ ಹಚ್ಚಿ ಸಿಪಿಐ(ಎಂ) ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *