ಉಡುಪಿ | ಬೈಂದೂರು ಕುಂದಾಪುರಗಳಿಗೆ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ಉಡುಪಿ :  ಬೈಂದೂರು ಕುಂದಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಬಸ್ ಇಲ್ಲದ ಮಾರ್ಗಗಳಲ್ಲಿ ಓಡಿಸಬೇಕು ಎಂದು ಹೋರಾಟ ನಡೆದು ಕೆಲವು ಮಾರ್ಗಗಳಿಗೆ ಪರವಾನಿಗೆ ನೀಡಿದರೂ ಖಾಸಗಿ ಬಸ್ ಮಾಲಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ ಸಾರಿಗೆ ಪ್ರಾಧಿಕಾರ ಈ ಬಗ್ಗೆ ತೆರವುಗೊಳಿಸಲು ಕ್ರಮವಹಿಸಿಲ್ಲ ಎಂದು ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ರಾಜೀವ ಪಡುಕೋಣೆ ಹೇಳಿದರು.  ಉಡುಪಿ

ನ್ಯೂ ಕಂಪ್ರೆನ್ಸಿವ್ ಏರಿಯಾ ಸ್ಕ್ರೀಮ್ 07.03.2019 ರಂತೆ ರಾಜ್ಯ ರಸ್ತೆ ಸಾರಿಗೆಯವರು ರಾಷ್ಟ್ರೀಕೃತ ಯೋಜನೆ ಪರ್ಮಿಟಿಗಾಗಿ ಅರ್ಜಿ ಸಲ್ಲಿಸಿದಾಗ ಸಂಬಂಧಿತ ಪ್ರಾಧಿಕಾರಿಗಳು ಪರವಾನಿಗೆಯನ್ನು ಕಡ್ಡಾಯವಾಗಿ ವಿತರಿಸಬೇಕು ಎಂದು ನ್ಯೂ ಕಂಪ್ರೇಸಿವ್ ಏರಿಯಾ ಸ್ಕ್ರೀಮ್ ನಲ್ಲಿ ದ್ರಡೀಕರಿಸಲಾಗಿದೆ ಆದುದರಿಂದ ಕುಂದಾಪುರ ಬೈಂದೂರು ಗ್ರಾಮೀಣ ಪ್ರದೇಶಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು ಕಳೆದ ಒಂದು ವರ್ಷದಿಂದ ಅಧಿಕ್ರತವಾಗಿ ಸಾರಿಗೆ ಪ್ರಾಧಿಕಾರ ಸಭೆ ನಡೆಸಿಲ್ಲ ಆದುದರಿಂದ ಸಾರಿಗೆ ಪ್ರಾಧಿಕಾರ ನಮ್ಮ ಸಂಘಟನೆ ಜೊತೆ ಜಂಟಿ ಸಭೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ನವದೆಹಲಿ | ಆರ್‌ಎಸ್‌ಎಸ್‌ನ ಪಾತ್ರದ ಬಗ್ಗೆ ಪ್ರಧಾನಿ ಮೋದಿಗೆ ಪಟೇಲ್ ಉಲ್ಲೇಖ ನೆನಪಿಸಿದ – ಜೈರಾಮ್ ರಮೇಶ್

ಧರಣಿಯನ್ನು ದ್ದೇಶಿಸಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಕಳೆದ ವರ್ಷದಿಂದ ಗ್ರಾಮೀಣ ಭಾಗಗಳಲ್ಲಿ ಸ್ಥಳೀಯವಾಗಿ ಹೋರಾಟಗಳನ್ನು ನಡೆಸಿದರೂ ಪ್ರಾಧೀಕಾರ ಕಡೆಗಣಿಸಿದೆ.

ಜನಪ್ರತಿನಿಧಿಗಳು, ಅಧಿಕಾರಿಗಳು,ಖಾಸಗಿ ಬಸ್ ಮಾಲಕರು ಒಂದಾಗಿ ಅಪವಿತ್ರ ಮೈತ್ರಿಯಿಂದ ಸರಕಾರಿ ಬಸ್ ಓಡಿಸದೇ ಮಹಿಳೆಯರಿಗೆ,ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆಯಿಂದ ವಂಚಿಸಿದ್ದಾರೆ ಎಂದು ಹೇಳಿದರು.ಖಾಸಗೀ ಬಸ್ ಗಳಲ್ಲಿ ವಿದ್ಯಾರ್ಥಿನಿಯರನ್ನು ಕೊನೆಯಲ್ಲಿ ಬಸ್ ಹತ್ತುವಂತೆ, ಸೀಟುಗಳನ್ನು ಕೊಡದೇ ಸತಾಯಿಸಿ ಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ | ಬೈಂದೂರು ಕುಂದಾಪುರಗಳಿಗೆ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ
ಉಡುಪಿ | ಬೈಂದೂರು ಕುಂದಾಪುರಗಳಿಗೆ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ಸ್ಥಳಕ್ಕೆ ಮಾನ್ಯ ಅಪಾರ ಜಿಲ್ಲಾಧಿಕಾರಿ ,ಸಾರಿಗೆ ಇಲಾಖೆಯ (RTO) ಅಧಿಕಾರಿಗಳು, KSRTC ಪಾಧಿಕಾರದ ಅಧಿಕಾರಿಗಳು, ಮನವಿ ಸ್ವೀಕರಿಸಿ ಮಾತಾನಾಡಿ ಅಕ್ಟೋಬರ್ 15 ರಂದು ಸಾರಿಗೆ ಪ್ರಾಧಿಕಾರದ ಜಂಟಿ ಸಭೆಯನ್ನು ನಿಗದಿ ಮಾಡಿ ಹೋರಾಟಗಾರರ ಮುಖಂಡರಿಗೆ ಅಹ್ವಾನ ನೀಡಿದರು
ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹಾಗೂ ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷ ರಾದ ಅಶೋಕ್ ಕೊಡವೂರು ಮತ್ತು ಉಪಾಧ್ಯಕ್ಷ ರಾದ ಪ್ರಶಾಂತ್ ಜತ್ತನ್ನ ಪ್ರತಿಭಟನಾ ಸ್ಥಳ ಕ್ಕೆ ಬಂದು ಮನವಿ ಸ್ವೀಕರಿಸಿ ಮಾತಾನಾಡಿದರು.

ಬೈಂದೂರು, ಪಡುಕೋಣೆ, ಆಲೂರು, ಗುಲ್ವಾಡಿ,ಮೊವಾಡಿ,ಹಕ್ಲಾಡಿ, ಕುಂದಬಾರಂದಾಡಿ ಗ್ರಾಮದ ಜನರು, ವಿದ್ಯಾರ್ಥಿಗಳು,ಕಟ್ಟಡ ಕಾರ್ಮಿಕರು, ಹಂಚು ಕಾರ್ಮಿಕರು ಭಾಗವಹಿಸಿದ್ದರು.

ಇದನ್ನೂ ನೋಡಿ : ಗಾಂಧೀಜಿಯವರ ಐದು ಮುಖ್ಯ ಚಿಂತನೆಗಳು ಮುಂದೆ ಆರೆಸ್ಸೆಸ್ ಸಿದ್ಧಾಂತದ ಬೆಳವಣಿಗೆಗೆ ಪೂರಕವಾಗಿದ್ದವೇ? Janashakthi Media

Donate Janashakthi Media

Leave a Reply

Your email address will not be published. Required fields are marked *