ಪಿಎಸ್ಐ ಅಕ್ರಮ ನೇಮಕಾತಿ : ‘ಫೋಟೊಶೂಟ್’ ನಲ್ಲಿ ಸಿಕ್ಕಿಬಿದ್ದ ಆರೋಪಿಗಳು!?

ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ‘ಫೋಟೊಶೂಟ್’ ಒಂದು ಪ್ರಮುಖ ಸಾಕ್ಷಿಯಾಗಿದ್ದು. ಪ್ರಕರಣವನ್ನು ಭೇದಿಸುವಲ್ಲಿ ಅಧಿಕಾರಿಗಳಿಗೆ ಸಹಾಯ ಮಾಡಿದೆ.

ಹೌದು, ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ. ಅಷ್ಟೆ ಅಲ್ಲದೆ ಆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಿಎಸ್‍ಐ ಪರೀಕ್ಷೆ ಬಳಿಕ ಎಲ್ಲ ಸಿಬ್ಬಂದಿಗೆ 4 ಸಾವಿರ ಹೆಚ್ಚಿನ ಭತ್ಯೆಯನ್ನು ಶಾಲೆಯ ಒಡತಿ ದಿವ್ಯಾ ಹಾಗರಗಿ ನೀಡಿದ್ದರು. ಆ ಭತ್ಯೆ ನೀಡುವ ಸಂದರ್ಭದಲ್ಲಿ ನೆನಪಿನ ಸ್ಮರಣಾರ್ಥ ಇದೊಂದು ಐತಿಹಾಸಿಕ ದಿನವೆಂದು ಎಲ್ಲರನ್ನೂ ಒಟ್ಟಿಗೆ ಕೂಡಿಸಿ ಫೋಟೋಶೂಟ್ ಮಾಡಿಕೊಂಡಿದ್ದರು.

ಇದನ್ನೂ ಓದಿ : ಪಿಎಸ್‌ಐ ನೇಮಕಾತಿ ಹಗರಣ: ಡಿವೈಎಸ್‌ಪಿ ಸೇರಿ 12 ಪೊಲೀಸ್ ಸಿಬ್ಬಂದಿ ಅಮಾನತು

ಫೋಟೋಶೂಟ್‍ನಲ್ಲಿ ಬಹುತೇಕರು ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಪರಿಣಾಮ ಇದೀಗ ಸಿಐಡಿ ಬಲೆಗೆ ಬಿದ್ದಿದ್ದಾರೆ. ಶಾಲಾ ಸಿಬ್ಬಂದಿಗಳ ಜೊತೆಗೆ ಪೊಲಿಸ್ ಅಧಿಕಾರಿಗಳು ಸಹ ಕ್ಯಾಮೆರಾಗೆ ಪೋಸ್ ನೀಡಿದ್ದರು.

ಈ ಫೋಟೋದಲ್ಲಿ ಸಿಐಡಿಯಿಂದ ಬಂಧಿತರಾಗಿರುವ ಸಿಪಿಐ ಆನಂದ್ ಮೇತ್ರಿ, ಇದೇ ಪ್ರಕರಣದಲ್ಲಿ ಅಮಾನತ್ತಾಗಿರುವ ಡಿವೈಎಸ್ಪಿ ಆರ್ ಆರ್ ಹೋಸಮನಿ, ಇನ್ಸ್‌ಪೆಕ್ಟರ್‌ ದೀಲಿಪ್ ಸಾಗಾರ್ ಕೂಡ ದಿವ್ಯಾ ಜತೆಗೆ ಪೋಟೊಗೆ ಪೋಸ್ ಕೊಟ್ಟಿದ್ದಾರೆ. ಈ ಅಕ್ರಮ ಪ್ರಕರಣದಲ್ಲಿ ಆರೋಪಿಯಾಗಿರುವ ಜ್ಞಾನ ಜ್ಯೋತಿ ಶಾಲೆಯ ಹೆಡ್ ಮಾಸ್ಟರ್ ಕಾಶಿನಾಥ್ ಅವರನ್ನೂ ಪೋಟೋದಲ್ಲಿ ಕಾಣಬಹುದು. ಇದರ ಜತೆತೆ ಶಾಲೆಯ ಸಿಬ್ಬಂದಿ, ಹೋಮ್ ಗಾರ್ಡ್ ಗಳು ಫೋಟೋದಲ್ಲಿ ಇದ್ದಾರೆ.

Donate Janashakthi Media

Leave a Reply

Your email address will not be published. Required fields are marked *