ಪುರುಷೋತ್ತಮ ಬಿಳಿಮಲೆ ಸೇರಿ ಐವರಿಗೆ ಮಾಸ್ತಿ ಪ್ರಶಸ್ತಿ

ಬೆಂಗಳೂರು ಫೆ 15 : ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್‌ ವತಿಯಿಂದ ನೀಡಲಾಗುವ ಈ ಸಾಲಿನ ‘ಮಾಸ್ತಿ ಪ್ರಶಸ್ತಿ’ಪ್ರಕಟಗೊಂಡಿದ್ದು, ಆರು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜನಶಕ್ತಿ ಮೀಡಿಯಾ ವಾಟ್ಸಪ್ ಸೇರಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ

ಪುರಸ್ಕೃತರು: ಲೇಖಕರಾದ ಸಂಧ್ಯಾ ಎಸ್‌.ಪೈ (ಶಿಶು ಸಾಹಿತ್ಯ), ಎಸ್‌.ಆರ್.ವಿಜಯಶಂಕರ (ವಿಮರ್ಶೆ), ಪುರುಷೋತ್ತಮ ಬಿಳಿಮಲೆ (ಸಂಶೋಧನೆ), ಸುಬ್ರಾಯ ಚೊಕ್ಕಾಡಿ (ಕಾವ್ಯ), ಕೇಶವರೆಡ್ಡಿ ಹಂದ್ರಾಳ (ಕಥೆ) ಹಾಗೂ ಸ.ರಘುನಾಥ (ಸೃಜನಶೀಲ)

 

‘ಪ್ರಶಸ್ತಿಗಳು ತಲಾ ₹25 ಸಾವಿರ ನಗದು, ಮಾಸ್ತಿ ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿವೆ. ಮಾರ್ಚ್‌ 27ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ’ಎಂದು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *