ಉಪನಾಮ ಕೇಸ್‌ ನಲ್ಲಿ ಮಧ್ಯಂತರ ತಡೆಗೆ ಕೋರ್ಟ್‌ ನಕಾರ; ಕೈ ನಾಯಕ ರಾಹುಲ್‌ಗೆ ಮತ್ತೆ ಶಾಕ್‌

ಹಮ್ಮದಾಬಾದ್ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ. ಮೋದಿ ಸಮುದಾಯ ನಿಂದಿಸಿದ ಆರೋಪದಡಿ ಸೂರತ್ ಕೋರ್ಟ್‌ನಿಂದ 2 ವರ್ಷ ಜೈಲು ಶಿಕ್ಷೆಗೆ ಒಳಗಾದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದಲೂ ಅನರ್ಹರಾಗಿದ್ದಾರೆ.

ಈ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಕುರಿತು ಜೂನ್ 4ರ ಬಳಿಕ ತೀರ್ಪು ನೀಡುವುದಾಗಿ ಗುಜರಾತ್ ಹೈಕೋರ್ಟ್ ಹೇಳಿದೆ. ಇದರಿಂದ ರಾಹುಲ್ ಗಾಂಧಿ ಅನರ್ಹರಾಗಿಯೇ ಮುಂದುವರಿಯಲಿದ್ದಾರೆ.

ಇದನ್ನೂ ಓದಿ : ಮೋದಿ ಉಪನಾಮ ಹೇಳಿಕೆ : ಪಾಟ್ನಾ ಹೈಕೋರ್ಟ್​ನಿಂದ ರಾಹುಲ್​ ಗಾಂಧಿಗೆ ರಿಲೀಫ್

ಸೂರತ್ ಕೋರ್ಟ್ ನೀಡಿದ ತೀರ್ಪಿನ ವಿರುದ್ದ ಗುಜರಾತ್ ಹೈಕೋರ್ಟ್‌ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ಇದರ ಜೊತೆಗೆ ಗುಜರಾತ್ ಹೈಕೋರ್ಟ್ ಈ ತೀರ್ಪು ಬರುವವರೆಗೂ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಇಷ್ಟೇ ಅಲ್ಲ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ತೀರ್ಪು ಜೂನ್ 4ರ ಬಳಿಕ ಪ್ರಕಟಿಸುವುದಾಗಿ ಹೇಳಿದೆ.

Donate Janashakthi Media

Leave a Reply

Your email address will not be published. Required fields are marked *