ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ ಕಾನೂನು ಬಾಹಿರ – ಬಿ ಕೆ ಇಮ್ತಿಯಾಜ್

ಮಂಗಳೂರು: ಮೇಯರ್ ಸುಧೀರ್ ಶೆಟ್ಟಿಯವರ ಸರ್ವಾಧಿಕಾರಿ ತೀರ್ಮಾನವನ್ನು ಪಾಲಿಕೆ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಬಿಕೆ ಇಮ್ತಿಯಾಜ್ ಆರೋಪಿಸಿದ್ದಾರೆ.

ಪಾಲಿಕೆ ಅಧಿಕಾರಿಗಳು ಮಂಗಳೂರು ನಗರದ ವಿವಿಧೆಡೆ ಸುಮಾರು ನೂರಕ್ಕೂ ಅಧಿಕ ಬಡಬೀದಿ ವ್ಯಾಪಾರಿಗಳ ಮೇಲೆ ಅಕ್ರಮ ಕಾರ್ಯಾಚರಣೆ ನಡೆಸಿ ಅವರ ಸೊತ್ತುಗಳನ್ನು ಹಾನಿ ಮಾಡಿ ನಾಶ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ. ಮೇಯರ್ ಆವರ ಕುಮ್ಮಕ್ಕಿನಿಂದ ಹೀಗೆ ಮಾಡಿದ್ದಾರೆ ಹೊರತು ಕಾನೂನು, ನಿಯಮಾನುಸಾರ ಮಾಡಿಲ್ಲ. ಪಾಲಿಕೆಯಲ್ಲಿರುವ ಪಟ್ಟಣ ವ್ಯಾಪಾರ ಸಮಿತಿ ಸಭೆ ನಡೆಸದೆ, ಅನುಮೋದನೆಗೊಂಡಿರುವ ಅಧಿಕೃತ ಬೀದಿ ವ್ಯಾಪಾರಿಗಳ ಮೇಲೆ ಧಾಳಿ ನಡೆಸಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಇದನ್ನು ಓದಿ : ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ – ಸಿಐಟಿಯು ತೀವ್ರ ಖಂಡನೆ

ಸಂಘದ ಮುಖಂಡರಾದ ನಮ್ಮನ್ನು ಬಂಧನದಲ್ಲಿಟ್ಟು ಕಾರ್ಯಾಚರಣೆ ನಡೆಸಿ ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಕಾರ್ಯಾಚರಣೆ ನಿಲ್ಲಿಸದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಬಿಕೆ ಇಮ್ತಿಯಾಜ್ ಹೇಳಿದ್ದಾರೆ.

ಇದನ್ನು ನೋಡಿ : ಫುಡ್ ಕ್ರಿಯೇಶನ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಿರುಕುಳ ವಿರೋಧಿಸಿ ಕಾರ್ಮಿಕರ ಪ್ರತಿಭಟನೆJanashakthi Media

Donate Janashakthi Media

Leave a Reply

Your email address will not be published. Required fields are marked *