ರೈತ ಚಳುವಳಿ ನಾಯಕ ರಾಕೇಶ್‌ ಟಿಕಾಯತ್‌ ಮೇಲೆ ಗುಂಡಾ ದಾಳಿ: ಸಿಪಿಐ(ಎಂ) ಖಂಡನೆ

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಟಿಯ ಸಂರ್ಭದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ನಾಯಕ ರಾಕೇಶ್ ಸಿಂಗ್ ಟಿಕಾಯತ್ ಹಾಗೂ ಯುದ್ಧವೀರ ಸಿಂಗ್ ಮುಂತಾದ ನಾಯಕರ ಮೇಲೆ ಕೆಲ ಬಿಜೆಪಿಯ ಹಾಗೂ ಆರ್ ಎಸ್ ಎಸ್  ಮೂಲದ ಗುಂಡಾಗಳು ದಾಳಿ ನಡೆಸಿ ಹಲ್ಲೆ ಮಾಡಿರುವುದನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಖಂಡಿಸಿದೆ.

ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಅವರು, ಕೂಡಲೇ ದಾಳಿಯಲ್ಲಿ ತೊಡಗಿದ ಗುಂಡಾಗಳ ಮೇಲೆ ಕಾನೂನು ಕ್ರಮ ಜರುಗಿಸಿ, ಕ್ರಮವಹಿಸಲು ಒತ್ತಾಯಿಸಿವೆ.

ದೇಶದ ರೈತ ಚಳುವಳಿಯ ಒತ್ತಡದ ಹಿನ್ನೆಲೆಯಲ್ಲಿ ಸ್ವತಃ ಪ್ರಧಾನ ಮಂತ್ರಿಗಳು ಜಗತ್ತಿನ ಮುಂದೆ ತಪ್ಪಾಗಿದೆಯೆಂದು ಕೈ ಮುಗಿದು ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಪರವಾದ ಮತ್ತು ರೈತ ವಿರೋಧಿಯಾದ ಕೃಷಿಕಾಯ್ದೆಗಳನ್ನು ವಾಪಾಸ್ಸು ಪಡೆದುಕೊಂಡ ನಂತರವೂ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹತಾಷೆಗೊಂಡಿರುವುದನ್ನು ಈ ದಾಳಿ ತೋರಿಸುತ್ತದೆ ಎಂದು ಸಿಪಿಐ(ಎಂ) ವಿಶ್ಲೇಷಿಸಿದೆ.

Donate Janashakthi Media

Leave a Reply

Your email address will not be published. Required fields are marked *