ರಟ್ಟೀಹಳ್ಳಿ: ‘ಸರ್ಕಾರ ಆತ್ಮಹತ್ಯೆ ಮಾಡಿಕೊಂಡ ರೈತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಯಾವ ಪುರುಷಾರ್ಥಕ್ಕಾಗಿ ಸಾಧನಾ ಸಮಾವೇಶ ಮಾಡುತ್ತಿದ್ದಾರೆ’ ಎಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತಮುಖಂಡರೊಂದಿಗೆ ಫೆಬ್ರವರಿ 11ರಂದು ಸಭೆ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ ಜಿಲ್ಲಾ ಘಟಕ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಪ್ರಶ್ನಿಸಿದರು.
ಇದನ್ನೂ ಓದಿ: ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜ ಗೆ ಜಾಮೀನು ನೀಡಲು ಮತ್ತೆ ನಿರಾಕರಿಸಿದ ಹೈಕೋರ್ಟ್
ಬಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕಗಳನ್ನು ದುಬಾರಿ ವೆಚ್ಚದಲ್ಲಿ ಖರೀದಿಸಿ, ಬೆಳೆದ ಬೆಳೆಗೆ ಸರಿಯಾದ ಬೆಲೆ ದೊರೆಯದಿದ್ದಾಗ ರೈತ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡುತ್ತಿದ್ದಾನೆ.
ಜಿಲ್ಲೆಯಲ್ಲಿ 12 ಲಕ್ಷ ಮೆಟ್ರಿಕ್ ಟನ್ ಗೋವಿನಜೋಳ ಬೆಳೆದಿದ್ದು, ಪ್ರತಿ ಕ್ವಿಂಟಲ್ಗೆ ₹1600ರಂತೆ ಮಾರಾಟ ಮಾಡಿ ರೈತರು ನೂರಾರು ಕೋಟಿ ಹಾನಿ ಅನುಭವಿಸಿದ್ದಾರೆ. ರಾಜ್ಯ ಸರ್ಕಾರ ಖರೀದಿ ಕೇಂದ್ರ ಆರಂಭಿಸುತ್ತೇವೆ ಎಂದು ಸುಳ್ಳು ಹೇಳಿ ರೈತರಿಗೆ ಅನ್ಯಾಯ ಮಾಡಿದೆ. ಹೀಗಿರುವಾಗ ಸರ್ಕಾರ ಹಾವೇರಿಯಲ್ಲಿ ಫೆ.14ರಂದು ಸಾಧನಾ ಸಮಾವೇಶ ಮಾಡುತ್ತಿದ್ದು, ಕಪ್ಪುಪಟ್ಟಿ ಪ್ರದರ್ಶನ ಮಾಡುತ್ತೇವೆ’ ಎಂದು ತಿಳಿಸಿದರು.
ಈ ವೇಳೆ ರೈತ ಮುಖಂಡರಾದ ಬಸನಗೌಡ ಗಂಗಪ್ಪನವರ, ಶಂಭಣ್ಣ ಮುತ್ತಗಿ, ಮಲ್ಲನಗೌಡ ಮಾಳಗಿ, ಎ.ಆರ್. ಮಣಕೂರ, ಮಂಜನಗೌಡ ಸಣ್ಣಗೌಡ್ರ, ಚಂದ್ರಪ್ಪ ಅಂಗಡಿ, ಹಾಲಪ್ಪ ಮಡಿವಾಳರ ಸೇರಿದಂತೆ ಇದ್ದರು.
ಇದನ್ನೂ ನೋಡಿ: “ವಿಕಸಿತ ಭಾರತ ಯಾರಿಗೆ? ಬ್ಯಾಂಕಿಂಗ್–ವಿಮಾ ವಲಯದಲ್ಲಿ ಜನಸಾಮಾನ್ಯರ ಹಿತ ಕಣ್ಮರೆಯೇ?” Janashakthi Media
