ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ:ಇಬ್ಬರನ್ನು ವಶಕ್ಕೆ ಪಡೆದ ಎನ್‌ಐಯ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರನ್ನು ಎನ್ ಐಎ ವಶಕ್ಕೆ ಪಡೆದಿದೆ ಎನ್ನಲಾಗಿದೆ. ಎನ್‌ಐಎ ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ  ಇಬ್ಬರು ಆರೋಪಿಗಳು ಎಂದು ತಿಳಿದುಬಂದಿತ್ತು. ಸ್ಪೋಟದ ಆರೋಪಿ ಜೊತೆಗೆ ಮತ್ತೊಬ್ಬ ಇದ್ದ.

ಈ ಇಬ್ಬರು ಶಿವಮೊಗ್ಗದ ತೀರ್ಥಹಳ್ಳಿಯವರಾಗಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಲಭ್ಯವಾಗಿತ್ತು. ಬಂಧಿತ ಆರೋಪಿಗಳು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಅರೊಪಿಯ ಜೊತೆಗೆ ನೇರ ಸಂಪರ್ಕ ಹೊಂದಿದ್ದರು ಎಂಬ ಸಾಕ್ಷ್ಯಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದೀಗ ಸ್ಪೋಟದ ಆರೋಪಿಯ ಜೊತೆಗೆ ನೇರ ಸಂಪರ್ಕದಲ್ಲಿದ್ದ ಬೆಂಗಳೂರು ಮೂಲದ ಇಬ್ಬರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸುತ್ತಿದೆ.

Donate Janashakthi Media

Leave a Reply

Your email address will not be published. Required fields are marked *