ಬೆಂಗಳೂರು | ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ

ಬೆಂಗಳೂರು :ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರಕ್ಕೆ ಯತ್ನ ನಡೆದಿರುವ ಆರೋಪ ಕೇಳಿ ಬಂದಿದೆ.

ನಗರದ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆಟೋದಲ್ಲಿ ಕರೆತಂದು ಅತ್ಯಾಚಾರ ಎಸಗಿರಬಹುದು ಎನ್ನಲಾಗಿದೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ :ಯಲಬುರ್ಗಾ : ದಲಿತ ಯುವಕನಿಗೆ ಹೇರ್ ಕಟ್ ಮಾಡಲು ನಿರಾಕರಿಸಿ ಆತನನ್ನು ಕತ್ತರಿಯಿಂದ ಇರಿದು ಕೊಲೆ 

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಕಮಿಷನರ್ (ಪೂರ್ವ) ರಮಣ್ ಗುಪ್ತಾ, “ಇಂದು ಮಧ್ಯರಾತ್ರಿ 1 ರಿಂದ 1:30 ರ ನಡುವೆ, ಎಚ್‌ಎಸ್‌ಆರ್ ಪೊಲೀಸ್ ಠಾಣೆಯಲ್ಲಿ ಒಂದು ಗಂಭೀರ ಘಟನೆ ವರದಿಯಾಗಿದೆ. ನಾವು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಘಟನೆ ವಿವರ

ನಿನ್ನೆ ಸ್ನೇಹಿತನ ಜೊತೆ ಯುವತಿ ಪಾರ್ಟಿಗೆ ಬಂದಿದ್ದಳು. ಪಾರ್ಟಿ ಮುಗಿಸಿ ಹೋಗುವಾಗ ಸ್ನೇಹಿತನ ಕಾರು, ಆಟೋಗೆ ಟಚ್ ಆಗಿದೆ. ಈ ವೇಳೆ ಆಟೋ ಚಾಲಕರು ಗಲಾಟೆ ಮಾಡಿದ್ದಾರೆ. ಸ್ಥಳಕ್ಕೆ ಹೊಯ್ಸಳ ಕೂಡ ಬಂದಿತ್ತು. ಇಷ್ಟರಲ್ಲಿ ಬೈಕ್ ಒಂದರಲ್ಲಿ ಡ್ರಾಪ್ ತೆಗೆದುಕೊಂಡು ಅಲ್ಲಿಂದ ಯುವತಿ ಹೊರಟಿದ್ದಳು. ಮಾರ್ಗ ಮಧ್ಯೆ ಇಳಿದು ಮತ್ತೊಂದು ಬೈಕ್‌ನಲ್ಲಿ ಡ್ರಾಪ್ ಪಡೆದಿದ್ದಾಳೆ. ಈ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿಯ ಮೇಲೆ ದೌರ್ಜನ್ಯ ಎಸಗಲಾಗಿದೆ.

ಈ ವೇಳೆ ಯುವತಿ ಎಮರ್ಜೆನ್ಸಿ ನಂಬರ್‌ಗಳಾಗಿ ತಂದೆ ಮತ್ತು ಸ್ನೇಹಿತೆಯ ನಂಬರ್ ನೀಡಿದ್ದಳು. ಎಮರ್ಜೆನ್ಸಿ ನಂಬರ್‌ಗೆ ಕರೆ ಹೋದಾಗ ಸಂತ್ರಸ್ತೆಯ ತಂದೆ ಮಗಳ ಗೆಳತಿಗೆ ಕರೆ ಮಾಡಿದ್ದರು. ಸ್ನೇಹಿತರು ಬಂದಾಗ ಸಂತ್ರಸ್ತೆಯ ಸ್ಥಿತಿ ಶೋಚನೀಯವಾಗಿತ್ತು. ಸಂತ್ರಸ್ತೆಯ ಬಟ್ಟೆ ಸಂಪೂರ್ಣವಾಗಿ ಕಿತ್ತುಹೋಗಿತ್ತು. ಕಾರಿನ ಟಾರ್ಪಲ್‌ನಿಂದ ಯುವತಿಯನ್ನ ಮುಚ್ಚಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 40 ಜನರ ಟೀಂ ರಚನೆ ಮಾಡಿ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *