ರ‍್ಯಾಪಿಡೋ, ಉಬರ್​​​​​​​​ ಸೇವೆ ಸ್ಥಗಿತ: ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್​ ಬೈಕ್ ಟ್ಯಾಕ್ಸಿ ರ‍್ಯಾಪಿಡೋ, ಉಬರ್​​​​​​​​ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವಂತೆ ಆದೇಶ ನೀಡಿದ್ದೂ, ಇದೀಗ ರಾಜ್ಯಾದ್ಯಂತ ಈ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.

ಈ ಕುರಿತಾಗಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಆಯುಕ್ತರಿಗೆ ಪತ್ರ ಬರೆದಿರುವ ಸಚಿವರು, ಕೋರ್ಟ್​​​ನ ಆದೇಶವನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮುಂದಿನ 6 ವಾರಗಳಲ್ಲಿ ರ‍್ಯಾಪಿಡೋ ಸೇರಿದಂತೆ ಇತರ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್​ ಕಳೆದ ಏ.2ರಂದು​ ಮಹತ್ವದ ಆದೇಶ ನೀಡಿತ್ತು.

ಇದನ್ನೂ ಓದಿ: ನೌಕಪಡೆ ಅಧಿಕಾರಿ ವಿನಯ್ ದಂಪತಿಯದ್ದು ಎನ್ನಲಾದ ವಿಡಿಯೋ ನಕಲಿ! ಮಾಧ್ಯಮಗಳ ವಿರುದ್ಧ ಕಿಡಿ

ಸರ್ಕಾರಿ ಮೋಟಾರು ವಾಹನ ಕಾಯ್ದೆ, 1988 ಸೆಕ್ಷನ್​ 3ರಡಿ ಮಾರ್ಗಸೂಚಿಗಳನ್ನು ರೂಪಿಸಬೇಕು, ಅಲ್ಲಿಯವರೆಗೆ ಬೈಕ್ ಟ್ಯಾಕ್ಸಿಗಳು ತಮ್ಮ ಕಾರ್ಯನಿರ್ವಹಿಸುವಂತಿಲ್ಲ ಎಂದು ಕೋರ್ಟ್ ಹೇಳಿತ್ತು.

ರಾಜ್ಯದ ಎಲ್ಲಾ ಬೈಕ್​ ಟ್ಯಾಕ್ಸಿ ಸೇವೆಗಳನ್ನು ಮುಂದಿನ ಆರು ವಾರಗಳ ಒಳಗೆ ನಿರ್ಬಂಧಿಸಬೇಕು ಎಂದು ಕೋರ್ಟ್​ ಹೇಳಿದ್ದು, ರ‍್ಯಾಪಿಡೋ, ಉಬರ್, ಓಲಾ ಸೇರಿದಂತೆ ಇತರೆ ಎಲ್ಲಾ ಬೈಕ್ ಟ್ಯಾಕ್ಸಿಗಳ ಸೇವೆ ನಿಲ್ಲಿಸಲಾಗುತ್ತದೆ. 6 ವಾರಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿತ್ತು.

ಇದನ್ನೂ ನೋಡಿ: ಶಾಂತಿ ಸ್ಥಾಪಿಸುವ ಬದಲು ಪ್ರಚೋದಿಸುತ್ತಿರುವ ಗೋಧಿ ಮೀಡಿಯಾ ಬಗ್ಗೆ ಕಾಶ್ಮೀರಿ ಜನರ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *