ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ .
ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ, ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ಇಂದು ಸಂಜೆ 5 ಗಂಟೆಗೆ RCB ತಂಡದ ಆಟಗಾರರು ಕ್ಲೋಸ್ಡ್ ಬಸ್ನಲ್ಲಿ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಲಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಡೀ ಆರ್ಸಿಬಿ ತಂಡಕ್ಕೆ ಮತ್ತೊಮ್ಮೆ ಸನ್ಮಾನ ಮಾಡಲಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ವಿಜಯೋತ್ಸವ ಕೂಡ ಆಚರಣೆ ಮಾಡಲಾಗುತ್ತಿದೆ.
RCB ವಿಜಯೋತ್ಸವದಲ್ಲಿ ಸ್ಟೇಡಿಯಂ ಒಳಗೆ ಹೋಗಲು ಎಲ್ಲರಿಗೂ ಅವಕಾಶ ಇರುವುದಿಲ್ಲ. ಟಿಕೆಟ್ ಮತ್ತು ಪಾಸ್ಗಳು ಹೊಂದಿದವರಿಗೆ ಮಾತ್ರ ಒಳಗೆ ಎಂಟ್ರಿ ನೀಡಲಾಗುತ್ತದೆ. ಇಂದು ಮಧ್ಯಾಹ್ನ 3ರಿಂದ ಸಂಜೆ 8ರವರೆಗೆ ಸ್ಟೇಡಿಯಂ ಸುತ್ತ ಅಭಿಮಾನಿಗಳ ಸಾಗರವೇ ಜಮಾಯಿಸುವ ನಿರೀಕ್ಷೆ ಇದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ವಿಜಯೋತ್ಸವದ ಹಿನ್ನೆಲೆಯಲ್ಲಿ ಇಂದು ಸಂಜೆ ರಾಜಭವನ, ವಿಧಾನಸೌಧ, ಕಾರ್ಪೋರೇಷನ್, ಎಂ.ಜಿ ರೋಡ್, ಬ್ರಿಗೇಡ್ ರೋಡ್, ರೆಸಿಡೆನ್ಸಿ ರಸ್ತೆ, ಶಿವಾಜಿನಗರ, ಕೆ.ಆರ್ ಸರ್ಕಲ್ ಭಾಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.
ಇದನ್ನೂ ನೋಡಿ : ಫ್ಯಾಸಿಸಂ ವಿರುದ್ಧ ವಿಜಯದ 80ನೇ ವಾರ್ಷಿಕೋತ್ಸವ | ಜನತಾ ಪ್ರತಿರೋಧ ಗೆರಿಲ್ಲಾ ಸೈನ್ಯಗಳ ಪಾತ್ರ – ಭಾಗ 3