ಬೆಂಗಳೂರು: 2024ರ ಮೇ 8ರಂದು ಕರ್ನಾಟಕ ರಾಜ್ಯ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದ 404 ಸಹಾಯಕ ಎಂಜಿನಿಯರ್ (ಎಇ) ಮತ್ತು ಕಿರಿಯ ಎಂಜಿನಿಯರ್ (ಜೆಇ) ನೇಮಕ ಸಂಬಂಧ, ಪ್ರಕಟಿಸಿದ್ದ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿರುವ ಹೈಕೋರ್ಟ್, ಆದಷ್ಟು ಶೀಘ್ರ ಮರು ಪರೀಕ್ಷೆ ನಡೆಸುವಂತೆ ಕೆಪಿಟಿಸಿಎಲ್ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ಶೀಘ್ರ
ಪರೀಕ್ಷೆಗೆ ಕೆಲವೇ ದಿನಗಳು ಇರುವಾಗ “ನಕರಾತ್ಮಕ ಅಂಕ’ (ನೆಗೆಟಿವ್ ಮಾರ್ಕಿಂಗ್) ಕುರಿತು ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಬೆಂಗಳೂರಿನ ನವೀನ್ ಕುಮಾರ್ ಮತ್ತಿತರರ ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಮೇ 28 ಬುಧವಾರದಂದು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾ| ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ. ಶೀಘ್ರ
ನೇಮಕಾತಿ ಸಂಬಂಧ 2024ರ ಫೆ. 18 ರಂದು ನಡೆಸಿದ ಪರೀಕ್ಷೆಗೆ ಹಾಜರಾದ ಎಲ್ಲ ಅಭ್ಯರ್ಥಿಗಳಿಗೆ ಕೆಪಿಸಿಎಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರುಪರೀಕ್ಷೆ ನಡೆಸಬೇಕು ಮತ್ತು ಒಂದು ವೇಳೆ ನೆಗೆಟಿವ್ ಮಾರ್ಕಿಂಗ್ ಇದ್ದರೆ ಆ ಬಗ್ಗೆ ಮೊದಲೇ ಅಭ್ಯರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಇದನ್ನೂ ಓದಿ: ಕಾಶ್ಮೀರದ ಚೆರಿ ಬೆಳೆಗಾರರಿಗೆ ಹೊಸ ಭರವಸೆ: ಮುಂಬೈಗೆ ಮೊದಲ ಕಾರ್ಗೋ ರೈಲು ಸೇವೆ ಆರಂಭ
ಪ್ರಕರಣದ ಹಿನ್ನೆಲೆ:
ಕೆಪಿಸಿಎಲ್ 2017ರ ಆ. 3ರಂದು ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಎಇ ಮತ್ತು ಜೆಇ ಸೇರಿದಂತೆ 404 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಅದಕ್ಕಾಗಿ ತಾಂತ್ರಿಕ ಪತ್ರಿಕೆ ಹಾಗೂ ಕನ್ನಡ ಪತ್ರಿಕೆ ಎರಡರ ಪರೀಕ್ಷೆಯನ್ನೂ ಸಹ 2018ರ ಜನವರಿಯಲ್ಲಿ ನಡೆಸಲಾಗಿತ್ತು. ಆನಂತರ ಕೆಪಿಸಿಎಲ್ 2018ರಲ್ಲಿ ನಡೆಸಿದ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಹೊಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿತ್ತು.
ಕೆಇಎ 2022ರ ಫೆಬ್ರವರಿಯಲ್ಲಿ ಪರೀಕ್ಷೆಗಳನ್ನು ನಡೆಸಿತ್ತು. ಆಗ ಕನ್ನಡ ಪತ್ರಿಕೆಗೆ 150 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಆಗ ಕೆಲವರು ಕೋರ್ಟ್ಗೆ ಹೋಗಿದ್ದರು. ಆನಂತರ ಹೊಸದಾಗಿ ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆನಂತರ ನ್ಯಾಯಾಲಯದಲ್ಲಿ ಮತ್ತೂಂದು ಸುತ್ತಿನ ಕಾನೂನು ಹೋರಾಟ ನಡೆದಿತ್ತು. ಹೀಗೆ ಹಲವು ಸುತ್ತಿನ ಕಾನೂನು ಹೋರಾಟದ ಬಳಿಕ ಪರಿಷ್ಕೃತ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು.
ನೇಮಕಾತಿ ಹಲವು ವರ್ಷಗಳ ಕಾಲ ನೆನೆಗುದಿಗೆ ಬಿದ್ದಿದೆ ಎನ್ನುವ ಕಾರಣಕ್ಕೆ ಹೈಕೋರ್ಟ್ನ ವಿಭಾಗೀಯಪೀಠ ಕರ್ನಾಟಕ ರಾಜ್ಯ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದಲ್ಲಿನ 404 ಸಹಾಯಕ ಅಭಿಯಂತರ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶಗಳನ್ನು ನೀಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿತ್ತು.
ಇದನ್ನೂ ನೋಡಿ: ಪಿಚ್ಚರ್ ಪಯಣ 159 | ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮೂರು ಸಿನಿಮಾಗಳತ್ತ ಒಂದು ನೋಟ