ಭವಿಷ್ಯ ಹೇಳಿ ಬಹುಮಾನ ಗೆಲ್ಲಿ:ನರೇಂದ್ರ ನಾಯಕ್

ಮಂಗಳೂರು: ರಾಷ್ಟ್ರೀಯ ವಿಚಾರವಾದಿ ಸಂಘದ ಅಧ್ಯಕ್ಷ ನರೇಂದ್ರ ನಾಯಕ್ ಭೂತಕಾಲ ಮತ್ತು ಭವಿಷ್ಯದ ಬಗ್ಗೆ ಸರಿಯಾಗಿ ಹೇಳಬಲ್ಲ, ವಿಶೇಷ ಶಕ್ತಿಯನ್ನು ಹೊಂದಿರುವಂತವರಿಗೆ ₹ 1 ಲಕ್ಷ ರೂ ಬಹುಮಾನ  ನೀಡುವುದಾಗಿ ಘೋಷಿಸಿದ್ದಾರೆ.

ಮಳಲಿ ಮಸೀದಿಯ ವಿವಾದಕ್ಕೆ ಸಂಬಂಧಿಸಿದಂತೆ  ಜ್ಯೋತಿಷಿಯೊಬ್ಬರು ಗತಕಾಲದ ಬಗ್ಗೆ ವೀಳ್ಯದೆಲೆ ಮೂಲಕ ಭವಿಷ್ಯ ಹೇಳಿರುವ ಹಿನ್ನೆಲೆಯಲ್ಲಿ ಅತಿಮಾನುಷ ಶಕ್ತಿ ಹೊಂದಿರುವವರು ಸವಾಲನ್ನು ಎದುರಿಸಿ ಬಹುಮಾನವನ್ನು ಪಡೆಯುವಂತೆ ಫೇಸ್‌ಬುಕ್‌ನಲ್ಲಿ  ಆಹ್ವಾನ ನೀಡಿದ್ದಾರೆ.

ಈ ಪ್ರಕಟನೆ ಪ್ರಕಟಗೊಳ್ಳುವ ವೇಳೆಗೆ ಭವಿಷ್ಯವನ್ನು ತಿಳಿಸಬೇಕಾದ ವಸ್ತುಗಳನ್ನು ಇರಿಸುವ ಮತ್ತು ಅದನ್ನು ಸೀಲ್ ಮಾಡಿರುವ ಸಮಯವು ಭೂತಕಾಲವಾಗಿರುತ್ತದೆ,ಅದನ್ನು ತೆರೆಯುವ ಸಮಯ ಭವಿಷ್ಯವಾಗಿರುತ್ತದೆ. ಭವಿಷ್ಯವನ್ನು ಹೇಳುವವರಿಗೆ ಇರುವ ಸವಾಲುಗಳನ್ನು ಒಳಗೊಂಡು  ಆರು ಪ್ರತ್ಯೇಕ ಕವರ್‌ಗಳನ್ನು ಲಕೋಟೆಯೊಂದರಲ್ಲಿ ಹಾಕಿ  2022ರ ಮೇ 26ರ 11.33ಕ್ಕೆ ಸೀಲ್ ಮಾಡಲಾಗಿದೆ. ಇದನ್ನು ಜೂನ್ 1ರಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ಬೆಳಗ್ಗೆ 10.30ಕ್ಕೆ ತೆರೆಯಲಾಗುವುದು. ಅಲ್ಲಿಯೇ ಬಹುಮಾನವನ್ನು ಸಹ ಘೋಷಿಸಲಾಗುವುದು’ ಎಂದಿದ್ದಾರೆ.

ಭವಿಷ್ಯ ಹೇಳುವವರು ಮುಚ್ಚಿದ ಆರು ಲಕೋಟೆಗಳಲ್ಲಿ ಏನಿದೆ ಎಂಬುದನ್ನು ನಿಖರವಾಗಿ ಹೇಳತಕ್ಕದ್ದು. ಈ ಸವಾಲನ್ನು ಎದುರಿಸಲು ಧಾರ್ಮಿಕ ನಂಬಿಕೆಗಳು, ಜಾತಿ, ಪಂಥ, ರಾಷ್ಟ್ರೀಯತೆಯನ್ನು ಲೆಕ್ಕಿಸದೆ ಎಲ್ಲರಿಗೂ ಮುಕ್ತವಾಗಿದೆ. ಆಸಕ್ತರು ತಮ್ಮ ಉತ್ತರಗಳನ್ನು [email protected] ಗೆ ಇಮೇಲ್ ಅಥವಾ 9448216343 ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮಾಡಬಹುದು.

ಮೇ 31 ಮಧ್ಯರಾತ್ರಿವರೆಗೆ ಕಳುಹಿಸಲಾಗುವ ಎಲ್ಲಾ ಉತ್ತರಗಳನ್ನು ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಸಮಯ ಕಡಿಮೆ ಇರುವುದರಿಂದ ಅಂಚೆ ಮೂಲಕ ಪ್ರವೇಶಗಳನ್ನು ಸ್ವೀಕರಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಒಂದಕ್ಕಿಂತ ಹೆಚ್ಚಿನ ಮಂದಿ ಉತ್ತರ ನೀಡಿದರೂ ಪ್ರತಿಯೊಬ್ಬರಿಗೂ ತಲಾ ಒಂದು ಲಕ್ಷ ರೂ. ಬಹುಮಾನ ದೊರೆಯಲಿದೆ. ಹಣಕಾಸಿನ ಲಭ್ಯತೆಯು ಗರಿಷ್ಠ 50 ಮಂದಿಗೆ ಮಾತ್ರ ಬಹುಮಾನ ನೀಡಲಾಗುವದು. ಎಂದು ನರೇಂದ್ರ ನಾಯಕ್ ಫೇಸ್‌ಬುಕ್‌ನಲ್ಲಿ ಹೇಳಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *