ರಿಯಾಸಿ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಮೊದಲ ಬಂಧನ

ನವದೆಹಲಿ: ರಿಯಾಸಿ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಮೊದಲ ಬಂಧನ ಮಾಡಿದ್ದಾರೆ.

“ರಿಯಾಸಿ ಭಯೋತ್ಪಾದಕ ದಾಳಿಯಲ್ಲಿ ಔಪಚಾರಿಕವಾಗಿ ಒಬ್ಬನನ್ನು ಬಂಧಿಸಲಾಗಿದೆ. ಅವನು ಮಾಸ್ಟರ್‌ಮೈಂಡ್ ಅಲ್ಲ ಆದರೆ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ” ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿ ಹಕೀಮ್ ದಿನ್ ರಾಜೌರಿ ನಿವಾಸಿಯಾಗಿದ್ದು, ದಾಳಿಗೆ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಒದಗಿಸಿರುವ ಶಂಕೆ ಇದೆ.

ಇದನ್ನು ಓದಿ : ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ

ಜೂನ್ 9 ರಂದು ಪೌನಿ ಪ್ರದೇಶದ ತೇರಿಯಾತ್ ಗ್ರಾಮದಲ್ಲಿ ಶಿವ ಖೋರಿ ಗುಹೆ ದೇಗುಲದಿಂದ ರಿಯಾಸಿ ಜಿಲ್ಲೆಯ ಕತ್ರಾಕ್ಕೆ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ಬಸ್ಸೊಂದರ ಮೇಲಿನ ಭಯೋತ್ಪಾದಕ ದಾಳಿಯಲ್ಲಿ 9 ಮಂದಿ ಸಾವನ್ನಪ್ಪಿ 33 ಜನರು ಗಾಯಗೊಂಡಿದ್ದರು.

ಜೂನ್ 17 ರಂದು, ಗೃಹ ಸಚಿವಾಲಯ (MHA) ಭಯೋತ್ಪಾದನಾ ದಾಳಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ಹಸ್ತಾಂತರಿಸಿತು. ಭಯೋತ್ಪಾದನೆ ವಿರುದ್ಧ ಕಾಶ್ಮೀರ ಕಣಿವೆಯಲ್ಲಿ ಸಾಧಿಸಿದ ಯಶಸ್ಸನ್ನು ಜಮ್ಮು ಪ್ರದೇಶದಲ್ಲಿ ಪುನರಾವರ್ತಿಸುವಂತೆ ಭದ್ರತಾ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

 

ಇದನ್ನು ನೋಡಿ : ಮೋದಿ 3.O ಸರ್ಕಾರ ತನ್ನ ಹಿಂದಿನ ಸರ್ವಾಧಿಕಾರಿ ನೀತಿ ಮುಂದುವರೆಸುತ್ತದೆಯೇ? Janashakthi Media

Donate Janashakthi Media

Leave a Reply

Your email address will not be published. Required fields are marked *