ನಾಸಿರ್ ಹುಸೇನ್ ಪ್ರಮಾಣವಚನ ತಡೆ ಹಿಡಿಯಿರಿ; ಉಪರಾಷ್ಟ್ರಪತಿಗೆ ಮಾಜಿ ಐಎಎಸ್, ಐಪಿಎಸ್ ಅಧಿಕಾರಿಗಳ ಪತ್ರ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಎಫ್‌ಎಸ್‌ಎಲ್‌ ವರದಿಯಲ್ಲಿ ಸಾಬೀತಾದ ಬೆನ್ನಲ್ಲೇ ರಾಜ್ಯಸಭೆಗೆ ಆಯ್ಕೆಯಾದ ನೂತನ ಸಂಸದ ನಾಸಿರ್ ಹುಸೇನ್ ಅವರ ಪ್ರಮಾಣವಚನವನ್ನು ತಡೆ ಹಿಡಿಯುವಂತೆ ಕೋರಿ 22 ಮಂದಿ ಮಾಜಿ ಐಎಸ್‌ಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಪ್ರಮಾಣವಚನ

ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ ಸಂದರ್ಭದಲ್ಲಿ ವಿಜಯೋತ್ಸವ ಮಾಡುವಾಗ ವಿಧಾನಸೌಧದಲ್ಲಿ ಪಾಕಿಸ್ತಾನದ ಪರವಾಗಿ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಎಫ್‌ಎಸ್‌ಎಲ್ ತನಿಖೆಗೆ ಸರ್ಕಾರ ನೀಡಿತ್ತು. ಇದೀಗ ಎಫ್‌ಎಸ್‌ಎಲ್ ವರದಿ ಹಿನ್ನೆಲೆಯಲ್ಲಿ 3 ಮಂದಿಯ ಬಂಧನ ಆಗಿದೆ. ಪ್ರಮಾಣವಚನ

ಆದರೆ ಬಂಧಿತರು ನಾಸಿರ್ ಹುಸೇನ್ ಬೆಂಬಲಿಗರು ಆಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಈ ನಡುವೆ ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಎಂ ಮದನ್ ಗೋಪಾಲ್ ನೇತೃತ್ವದಲ್ಲಿ 22 ಮಾಜಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಸಹಿ ಮಾಡಿ ಈ ಪತ್ರವನ್ನು ಉಪರಾಷ್ಟ್ರಪತಿಗೆ ಬರೆದಿದ್ದಾರೆ.

ಇದನ್ನು ಓದಿ :ಛತ್ತೀಸ್‍ಗಢ : ವಸತಿ ಶಾಲೆಯಲ್ಲಿ ಬೆಂಕಿ, 4 ವರ್ಷದ ಬಾಲಕಿ ಸಾವು

ಸಾಂದರ್ಭಿಕ ಸಾಕ್ಷಿಗಳ ಪ್ರಕಾರ ನಾಸಿರ್ ಹುಸೇನ್ ಅವರ ಪಾತ್ರ ಈ ಪ್ರಕರಣದಲ್ಲಿ ನೇರವಾಗಿದೆ. ಪಾಕಿಸ್ಥಾನದ ಪರವಾಗಿ ಅವರ ಬೆಂಬಲಿಗರು ಘೋಷಣೆ ಕೂಗುವ ಮೂಲಕ ರಾಷ್ಟ್ರದ ಹಿತಕ್ಕೆ ಧಕ್ಕೆ ಉಂಟು ಮಾಡಿದ್ದಾರೆ.

ಈ ನಿಟ್ಟಿನಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಳ್ಳುವ ವರೆಗೂ ಅವರಿಗೆ ರಾಜ್ಯಸಭೆಯಲ್ಲಿ ಪ್ರಮಾಣವಚನ ಬೋಧಿಸಬಾರದು ಎಂದು ಮನವಿ ಮಾಡಲಾಗಿದೆ. ಸದನದ ಗೌರವ ಎತ್ತಿ ಹಿಡಿಯುವ ನಿಟ್ಟಿನಲ್ಲಿ ರಾಜ್ಯಸಭೆಯ ಸಭಾಪತಿಯೂ ಆಗಿರುವ ಉಪರಾಷ್ಟ್ರಪತಿಗಳು ಈ ಕ್ರಮವನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ರ ಬಂಧನ ಆಗಿದೆ. ಈ ಪೈಕಿ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದರೆ ಓರ್ವ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರದಂದು ಬೆಳಗಾವಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ನಾಸೀರ್ ಹುಸೇನ್ ಗೆ ಪ್ರಮಾಣ ವಚನ ಬೋಧನೆ ಮಾಡದಂತೆ ರಾಷ್ಟ್ರಪತಿಗೆ ಬಿಜೆಪಿಯಿಂದ‌ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದರು. ಪ್ರಕರಣದಲ್ಲಿ ಸಯ್ಯದ್ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಅಪರಾಧಿಯನ್ನಾಗಿ ಮಾಡಬೇಕು. ತನಿಖೆ ಪೂರ್ಣಗೊಳ್ಳುವ ವರೆಗೂ ಅವರಿಗೆ ಪ್ರಮಾಣ ವಚನ ಬೋಧನೆ ಮಾಡಬಾರದು ಎಂದು ಉಪರಾಷ್ಟ್ರಪತಿಗೆ ಬಿಜೆಪಿ ಮನವಿ ಪತ್ರ ಬರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದರು.

ಇದನ್ನು ನೋಡಿ :ಸಂಸದೀಯ ಪ್ರಜಾಸತ್ತೆಯ ಮೇಲೆ ಕೇಂದ್ರ ಸರ್ಕಾರದ ಕ್ರೂರ ಸವಾರಿ

Donate Janashakthi Media

Leave a Reply

Your email address will not be published. Required fields are marked *