ತುಮಕೂರು: ಜೂನ್ 6 ಶುಕ್ರವಾರ ರಾತ್ರಿ ಕವಿ, ನಿವೃತ್ತ ಪ್ರಾಂಶುಪಾಲ ಎನ್.ನಾಗಪ್ಪ (71) ನಗರದ ಗೋಕುಲ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು
ಪತ್ನಿ, ಇಬ್ಬರು ಪುತ್ರರು ಇದ್ದಾರೆ. ದುಬೈನಲ್ಲಿ ನೆಲೆಸಿರುವ ಮಗನ ಜತೆ ಕೆಲ ದಿನಗಳಿಂದ ವಾಸವಿದ್ದು, ವಾಪಸಾಗಿದ್ದರು.
ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಿಗ್ಗೆ ಗೊತ್ತಾಗಿದೆ. ಉಪನ್ಯಾಸಕರಾಗಿದ್ದ ಸಮಯದಲ್ಲಿ ವಿದ್ಯಾರ್ಥಿನಿಯನ್ನೇ ಪ್ರೀತಿಸಿ ಅಂತರ್ ಜಾತಿ ವಿವಾಹವಾಗಿದ್ದರು. ಆ ಕಾಲಕ್ಕೆ ಈ ವಿಚಾರ ಸಾಕಷ್ಟು ಸುದ್ದಿಯಾಗಿತ್ತು.
ಇದನ್ನೂ ಓದಿ: ಆರ್ಬಿಐನ 2.69 ಲಕ್ಷ ಕೋಟಿ ರೂ.ಗಳ ಮಿಗುತಾಯ ಹಣ ಕೇಂದ್ರ ಸರ್ಕಾರಕ್ಕೆ
‘ಸಾಕವ್ವ’ (ಕವನ ಸಂಕಲನ), ‘ಕುಂಬಾರಗುಂಡಯ್ಯ’ ಕೃತಿ ರಚಿಸಿದ್ದರು. ರೈತ, ದಲಿತ, ಬಂಡಾಯ ಸಾಹಿತ್ಯ, ಪ್ರಗತಿಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸಿದವರು.
ಗುಬ್ಬಿ ತಾಲ್ಲೂಕು ಸುರಿಗೇನಹಳ್ಳಿ ಗ್ರಾಮದವರಾಗಿದ್ದು, ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಚಿಕ್ಕನಾಯಕನಹಳ್ಳಿ ಕಾಲೇಜಿನಲ್ಲಿ ಸಾಕಷ್ಟು ವರ್ಷ ಕೆಲಸ ನಿರ್ವಹಿಸಿದ್ದರು. ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕೆಲಸ ನಿರ್ವಹಿಸಿ 2015ರಲ್ಲಿ ನಿವೃತ್ತರಾಗಿದ್ದರು.
ಇದನ್ನೂ ನೋಡಿ: ಕೊಠಡಿ ನಿರ್ಮಿಸಿ ಎಂದ ಶಿಕ್ಷಕ |ಸನ್ಮಾನಿಸುವ ಜಾಗದಲ್ಲಿ ಅಮಾನತಿನ ಬಹುಮಾನ Janashakthi Media