ಪಟ್ನಾ | ವಿವಿಧ ರಾಜ್ಯಗಳ ಮತದಾರರ ಪಟ್ಟಿ ಪರಿಷ್ಕರಣೆ : ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಪಟ್ನಾ:  ಕಾಂಗ್ರೆಸ್ ನಾಯಕ ಪವನ್ ಖೇರಾ  ಅವರು 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಎರಡನೇ ಹಂತದ ‘ವಿಶೇಷ ಸಮಗ್ರ ಪರಿಷ್ಕರಣೆ’ ಮಾಡುವುದಾಗಿ ಘೋಷಿಸಿದ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಟ್ನಾ

ಬಿಹಾರ ಎಸ್‌ಐಆರ್ ವೇಳೆ ಕೇಳಿದ ಪ್ರಶ್ನೆಗೆ ಆಯೋಗ ಉತ್ತರಿಸಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ನಡೆಸುವ ಮುನ್ನ ಮಾರ್ಗಸೂಚಿಗಳನ್ನು ಸಾರ್ವಜನಿಕಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಪಟ್ನಾ

ಇದನ್ನೂ ಓದಿ: ಹುಬ್ಬಳ್ಳಿ | ಗುಲಗಂಜಿ ಗಿಡದ ಎಲೆ ತಿಂದು ಮಗು ಅಸ್ವಸ್ಥ : ಔಷಧಿಗಾಗಿ ರಾತ್ರಿ ಪರದಾಟ

ತಮಿಳುನಾಡಿನಲ್ಲಿ ಮುಂದಿನ ವಾರದಿಂದ ಎಸ್‌ಐಆರ್‌ ಪ್ರಕ್ರಿಯೆ ಶುರು: ಚುನಾವಣಾ ಆಯೋಗ

‘ಬಿಹಾರ ಎಸ್‌ಐಆರ್ ವೇಳೆ ಉಂಟಾದ ಸವಾಲುಗಳು ಏನೆಲ್ಲಾ? ಬಿಹಾರ ಎಸ್‌ಐಆರ್ ವೇಳೆ ನಾವು ಎತ್ತಿದ ಪ್ರಶ್ನೆಗಳಿಗೆ ಚುನಾವಣಾ ಆಯೋಗದಿಂದ ನಾವು ಬಯಸುತ್ತಿದ್ದ ಉತ್ತರಗಳು ಏನಾದವು? ಆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕಾಯಿತು. ಚುನಾವಣಾ ಆಯೋಗ ತನ್ನ ವಿಶ್ವಾಸಾರ್ಹತೆ ಕಳೆದುಕೊಂಡಿದೆ’ ಎಂದು ಅವರು ಹೇಳಿದ್ದಾರೆ.

ಅಲ್ಲದೆ ಬೇರೆ ರಾಜ್ಯಗಳಲ್ಲಿ ಎಸ್‌ಐಆರ್ ನಡೆಸುವಾಗ 2003ರ ಮಾರ್ಗಸೂಚಿಗಳನ್ನು ಪಾಲಿಸಲಿದೆಯೇ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದೂ ಆಗ್ರಹಿಸಿದ್ದಾರೆ.

ಇದನ್ನೂ ನೋಡಿ : ದ್ವೇಷ ಬಿತ್ತುವ ಪಥಸಂಚಲನ ಬೇಡ – ಸಂವಿಧಾನ ದೀವಿಗೆ ಬೆಳಗುವ ಸೌಹಾರ್ದ ನಡಿಗೆ ಬೇಕು Janashakthi Media

Donate Janashakthi Media

Leave a Reply

Your email address will not be published. Required fields are marked *