2025ರ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ, ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಆರ್ಎಲ್ಜೆಪಿ) ಎನ್ಡಿಎ ಮೈತ್ರಿಕೂಟದಿಂದ ಹೊರಬಿದ್ದಿದೆ. ಪಕ್ಷದ ಮುಖ್ಯಸ್ಥ ಪಶುಪತಿ ಕುಮಾರ್ ಪಾರಸ್ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದು, ಎನ್ಡಿಎ ಮೈತ್ರಿಕೂಟದಲ್ಲಿ ತಮ್ಮ ಪಕ್ಷದ ಮೇಲೆ ಅನ್ಯಾಯ ಮತ್ತು ನಿರ್ಲಕ್ಷ್ಯ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಪಾರಸ್ ಅವರು 2014 ರಿಂದ ಎನ್ಡಿಎ ಜೊತೆ ಇದ್ದರೂ, 2024ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಟಿಕೆಟ್ ನೀಡದಿರುವುದು ಮತ್ತು ಮೈತ್ರಿಕೂಟದ ಸಭೆಗಳಲ್ಲಿ ಆರ್ಎಲ್ಜೆಪಿಗೆ ಪ್ರಾಮುಖ್ಯತೆ ನೀಡದಿರುವುದು ಅವರನ್ನು ನಿರಾಶೆಗೊಳಿಸಿದೆ.
ಈ ನಿರ್ಧಾರವು ಎನ್ಡಿಎ ಮೈತ್ರಿಕೂಟಕ್ಕೆ ಬಿಹಾರ ಚುನಾವಣೆಗೆ ಮುನ್ನ ದೊಡ್ಡ ಹೊಡೆತವಾಗಿದೆ. ಪಾರಸ್ ಅವರು ಮಹಾಘಟಬಂಧನ್ ಜೊತೆಗೂಡಿ ಮುಂದಿನ ಚುನಾವಣೆಗೆ ಸಜ್ಜಾಗುವ ಸಾಧ್ಯತೆ ಇದೆ ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ:-ಬೆಂಗಳೂರು| ಪರಿಕ್ಷೆಯ ಭಯದಿಂದ 21 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ
ಪಾರಸ್ ಅವರು 2024ರ ಮಾರ್ಚ್ನಲ್ಲಿ ಕೇಂದ್ರ ಸಚಿವ ಸ್ಥಾನದಿಂದ ರಾಜೀನಾಮೆ ನೀಡಿದ್ದರು. ಈ ನಿರ್ಧಾರವು ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.