ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ ‘ಸುಪ್ರೀಂ’

ನವದೆಹಲಿ : 2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಎಲ್ಲಾ 11 ಅಪರಾಧಿಗಳಿಗೆ ಕ್ಷಮಾಪಣೆ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಬಿಲ್ಕಿಸ್

ಪ್ರಕರಣದ 11 ಅಪರಾಧಿಗಳಿಗಳ ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮುನ್ನವೇ ಅವರನ್ನು ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಕ್ಷಮಾಪಣೆ ನೀಡಿರುವುದು ಸೂಕ್ತ ಸರ್ಕಾರವಲ್ಲ ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, ಗುಜರಾತ್ ರಾಜ್ಯವು ಈ ರೀತಿಯ ಆದೇಶಗಳನ್ನು ನೀಡಲು ಸಮರ್ಥವಾಗಿಲ್ಲ. ಅಲ್ಲದೆ, “ಸಂತ್ರಸ್ತೆಯ ಹಕ್ಕುಗಳೂ ಮುಖ್ಯ, ಮಹಿಳೆ ಗೌರವಕ್ಕೆ ಅರ್ಹಳು. ಮಹಿಳೆಯರ ವಿರುದ್ಧ ನಡೆಸಲಾಗುವ ಬರ್ಬರ ಅಪರಾಧಗಳಲ್ಲಿ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಲು ಸಾಧ್ಯವೇ?,” ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ಇದನ್ನೂ ಓದಿ : ಬಿಲ್ಕಿಸ್‌ ಬಾನು ಪ್ರಕರಣ:11 ಅಪರಾಧಿಗಳಿಗೆ ಶಿಕ್ಷೆಯನ್ನು ಕಡಿತದ ಮೂಲ ದಾಖಲೆಗಳನ್ನು ಸಲ್ಲಿಸಲು ಕೇಂದ್ರ,ಗುಜರಾತ್‌ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ

“ಅಪರಾಧಿಗಳಿಗೆ ಶಿಕ್ಷೆ ಯಾವ ರಾಜ್ಯದ ನ್ಯಾಯಾಲಯದಲ್ಲಿ ವಿಧಿಸಲಾಗಿತ್ತೋ ಆ ರಾಜ್ಯದ ಸರ್ಕಾರಗಳು ಶಿಕ್ಷೆ ಕಡಿತಗೊಳಿಸುವ ಬಗ್ಗೆ ನಿರ್ಧರಿಸಬಹುದೇ ವಿನಹ ಅಪರಾಧ ನಡೆದ ರಾಜ್ಯದ ಸರ್ಕಾರಗಳಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಗುಜರಾತ್‌ ಸರ್ಕಾರ ಬಿಲ್ಕಿಸ್‌ ಬಾನು ಪ್ರಕರಣದ 11 ಅಪರಾಧಿಗಳನ್ನು 2022ರಲ್ಲಿ ಬಿಡುಗಡೆಗೊಳಿಸಿತ್ತು. ಈ ಘಟನೆ ವಿಪಕ್ಷಗಳು, ಹೋರಾಟಗಾರರು ಮತ್ತು ಸಾಮಾಜಿಕ ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಅಪರಾಧಿಗಳನ್ನು ಬಿಡುಗಡೆಗೊಳಿಸಲಾಗುವು ದು ಎಂಬ ಕುರಿತು ತಮಗೂ ಮಾಹಿತಿ ನೀಡಲಾಗಿರಲಿಲ್ಲ ಎಂದು ಸಂತ್ರಸ್ತೆ ಬಿಲ್ಕಿಸ್‌ ಬಾನು ಹೇಳಿದ್ದರು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬದ ಸದಸ್ಯರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ 11 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ್ದು, ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು. ಬಿಲ್ಕಿಸ್

ಈ ವಿಡಿಯೋ ನೋಡಿಬಿಲ್ಕಿಸ್‌ ಬಾನು ಪ್ರಕರಣ : ಅಪರಾದಿಗಳನ್ನು ಪುನಃ ಜೈಲಿಗೆ ಕಳುಹಿಸಿ

 

Donate Janashakthi Media

Leave a Reply

Your email address will not be published. Required fields are marked *