ಕೋವಿಡ್ ನಿಯಂತ್ರಣ: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರವು  ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ ಜಿಲ್ಲೆಗೆ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಗೋವಿಂದ ಕಾರಜೋಳ ಬೆಳಗಾವಿ ಜಿಲ್ಲಾ ಉಸ್ತುವಾರಿ, ಕೆ.ಎಸ್.ಈಶ್ವರಪ್ಪ-ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ, ಬಿ.ಶ್ರೀರಾಮುಲು ಬಳ್ಳಾರಿ ಜಿಲ್ಲಾ ಉಸ್ತುವಾರಿ, ವಿ.ಸೋಮಣ್ಣ ಚಾಮರಾಜನಗರ ಜಿಲ್ಲಾ ಉಸ್ತುವಾರಿ, ಉಮೇಶ್ ಕತ್ತಿ ವಿಜಯಪುರ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ಎಸ್.ಅಂಗಾರ ಉಡುಪಿ ಜಿಲ್ಲಾ ಉಸ್ತುವಾರಿ, ಆರಗ ಜ್ಞಾನೇಂದ್ರ ತುಮಕೂರು ಜಿಲ್ಲಾ ಉಸ್ತುವಾರಿ, ಡಾ.ಅಶ್ವತ್ಥ್ ನಾರಾಯಣ ರಾಮನಗರ ಜಿಲ್ಲಾ ಉಸ್ತುವಾರಿ, ಸಿ.ಸಿ.ಪಾಟೀಲ್ ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ಆನಂದ್ ಸಿಂಗ್ ಕೊಪ್ಪಳ ಜಿಲ್ಲೆ, ಕೋಟ ಶ್ರೀನಿವಾಸ ಪೂಜಾರಿ ಉತ್ತರ ಕನ್ನಡ ಜಿಲ್ಲೆ, ಪ್ರಭು ಚೌಹಾಣ್ ಯಾದಗಿರಿ ಜಿಲ್ಲೆ, ಮುರುಗೇಶ್ ನಿರಾಣಿ ಕಲಬುರಗಿ ಜಿಲ್ಲೆ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲೆ, ಎಸ್.​ಟಿ.ಸೋಮಶೇಖರ್ ಮೈಸೂರು ಜಿಲ್ಲೆ, ಬಿ.ಸಿ.ಪಾಟೀಲ್ ಚಿತ್ರದುರ್ಗ, ಗದಗ ಜಿಲ್ಲೆಗಳಿಗೆ ನೇಮಕ ಮಾಡಲಾಗಿದೆ.

ಭೈರತಿ ಬಸವರಾಜ್ ದಾವಣಗೆರೆ ಜಿಲ್ಲೆಗೆ, ಡಾ.ಕೆ.ಸುಧಾಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೆ.ಗೋಪಾಲಯ್ಯ-ಹಾಸನ, ಮಂಡ್ಯ ಜಿಲ್ಲೆಗಳಿಗೆ, ಶಶಿಕಲಾ ಜೊಲ್ಲೆ ವಿಜಯನಗರ ಜಿಲ್ಲೆಗೆ, ಎಂಟಿಬಿ ನಾಗರಾಜ್ ಚಿಕ್ಕಬಳ್ಳಾಪುರ ಜಿಲ್ಲೆಗೆ, ಕೆ.ಸಿ. ನಾರಾಯಣಗೌಡ ಶಿವಮೊಗ್ಗ ಜಿಲ್ಲೆಗೆ, ಬಿ.ಸಿ.ನಾಗೇಶ್ ಕೊಡಗು ಜಿಲ್ಲೆಗೆ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ವಿ.ಸುನಿಲ್ ಕುಮಾರ್ ದಕ್ಷಿಣ ಕನ್ನಡ, ಹಾಲಪ್ಪ ಆಚಾರ್ ಧಾರವಾಡ, ಶಂಕರ ಪಾಟೀಲ್ ಮುನೇನಕೊಪ್ಪ-ರಾಯಚೂರು, ಬೀದರ್, ಮುನಿರತ್ನ ಕೋಲಾರ ಜಿಲ್ಲೆ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿ ಯಾರಿಗೂ ನೀಡದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಬೆಂಗಳೂರು ನಗರ ಉಸ್ತುವಾರಿಗೆ ಭಾರಿ ಪೈಪೋಟಿಯಿತ್ತು. ಆದರೆ ಬೆಂಗಳೂರು ನಗರ ಉಸ್ತುವಾರಿಯನ್ನು ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *