ಜುಲೈ ತಿಂಗಳಲ್ಲಿ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ?

ಬೆಂಗಳೂರು : ಈಗಾಗಲೇ ಕಳೆದ ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಸಾರಿಗೆ ನೌಕರರು ಲಾಕ್ ಡೌನ್ ಗೂ ಮುನ್ನ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ಸಾರಿಗೆ ಸಂಚಾರ ಸ್ಥಗಿತಗೊಂಡು, ಸಾರ್ವಜನಿಕರಿಗೆ ಬಸ್ ಸಂಚಾರವಿಲ್ಲದೇ ಪರದಾಡುವಂತ ಪರಿಸ್ಥಿತಿ ಎದುರಾಗಿತ್ತು. ಈಗ ಮತ್ತೆ ತಮ್ಮ ಬಾಕಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನೌಕರರ ಬಹುಮುಖ್ಯ ಬೇಡಿಕೆಗಳಲ್ಲಿ ಒಂದಾದಂತ 6ನೇ ವೇತನ ಆಯೋಗ ಜಾರಿಯ ಬೇಡಿಕೆಯನ್ನು ಸರ್ಕಾರ ಲಿಖಿತ ರೂಪದಲ್ಲಿ ಬೇಡಿಕೆ ಈಡೇರಿಸುತ್ತೇವೆ ಎನ್ನುವ ಭರವಸೆಯನ್ನು ಇಲ್ಲಿಯವರೆಗೆ ಈಡೇರಿಸಿಲ್ಲ.

ನೌಕರರ ವಿವಿಧ ಬೇಡಿಕೆ ಈಡೇರಿಕೆ ಕುರಿತಂತೆ ಮತ್ತೆ ಮುಷ್ಕರ ನಡೆಸಬೇಕೋ ಅಥವಾ ಬೇಡವೇ ಎನ್ನುವ ಕುರಿತಂತೆ ಜುಲೈ 1ರಂದು ಸಾರಿಗೆ ನೌಕರರ ಕೂಟದಿಂದ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಸಾರಿಗೆ ನೌಕರರನ್ನು ಮುಷ್ಕರದ ಕಾರಣದಿಂದ ವರ್ಗಾವಣೆ ಮಾಡಿರುವ ವಿಚಾರ, ಹಾಗೂ ಕೆಲ ನೌಕರರ ಮೇಲೆ ದೂರು ದಾಖಲಿಸಿರುವ ಕ್ರಮದ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂತಹ ವರ್ಗಾವಣೆ, ದೂರನ್ನು ವಾಪಾಸ್ ಪಡೆಯುವಂತೆಯೂ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ. ಒಂದು ವೇಳೆ ಒಪ್ಪದೇ ಇದ್ದರೇ, ಮುಷ್ಕರ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

Donate Janashakthi Media

Leave a Reply

Your email address will not be published. Required fields are marked *