ಸುಪ್ರೀಂ ಕೋರ್ಟ್‌: ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದ ಉನ್ನತ ಸಮಿತಿ ಸಭೆಯ ವಿವರಣೆ ಕೋರಿದ್ದ ಅರ್ಜಿ ವಜಾ

ನವದೆಹಲಿ: ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದ ಉನ್ನತ ಮಟ್ಟದ ಸಮಿತಿ(ಕೊಲಿಜಿಯಂ) ಬಹು-ಸದಸ್ಯ ಸಂಸ್ಥೆಯಾಗಿದ್ದು, ಅದರ ತಾತ್ಕಾಲಿಕ ನಿರ್ಧಾರವನ್ನು ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದು, ಕೊಲಿಜಿಯಂ ಸಭೆಯ ವಿವರಣೆ ನೀಡಲು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

2018ರ ಕೊಲಿಜಿಯಂ ಸಭೆಯ ವಿವರಣೆಯನ್ನು ಆರ್‌ಟಿಐ ಕಾಯ್ದೆಯಡಿ ಬಹಿರಂಗಪಡಿಸುವಂತೆ ಕೋರಿದ ಮನವಿ ಪುರಸ್ಕರಿಸಿ ಮಾಹಿತಿ ಬಹಿರಂಗ ಪಡಿಸಬೇಕೆಂದು ಕೋರಿದ ಅರ್ಜಿಯನ್ನು ನ್ಯಾಯಾಲಯ ಇಂದು(ಡಿಸೆಂಬರ್‌ 09) ತಿರಸ್ಕರಿಸಿದೆ.

ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಮಾಹಿತಿ ಹಕ್ಕು ಕಾಯ್ದೆಯಡಿ ವಿವರಗಳನ್ನು ಕೋರಿದ್ದರು. ಇಬ್ಬರು ನ್ಯಾಯಾಧೀಶರ ನೇಮಕದ ಕುರಿತಂತೆ ನಡೆಸಲಾದ ಸಭೆಯ ವಿವರಗಳನ್ನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದನ್ನು ಈ ತನಕ ಸಾರ್ವಜನಿಕಗೊಳಿಸಲಾಗಿರಲಿಲ್ಲ. ಅದರ ವಿವರವನ್ನು ನಿರಾಕರಿಸಲಾಯಿತು ಹಾಗೂ  ಅವರು ಈ  ನಿರ್ಧಾರವನ್ನು ಪ್ರಶ್ನಿಸಿದ್ದರು. ಆ ಸಭೆಯಲ್ಲಿ ಹಾಜರಿದ್ದ ನ್ಯಾಯಾಧೀಶರೊಬ್ಬರ ಸಂದರ್ಶನಗಳನ್ನು ಆಧರಿತ “ಲೇಖನಗಳ ಮೇಲೆ ಅರ್ಜಿದಾರರು ಅವಲಂಬಿತರಾಗಿದ್ದಾರೆ” ಎಂಬ ವಿಚಾರವನ್ನು ನ್ಯಾಯಾಧೀಶರು ಗಮನಿಸಿದರು.

ನಾವು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಂತರದ ನಿರ್ಣಯವು ತುಂಬಾ ಸ್ಪಷ್ಟವಾಗಿತ್ತು. ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ, ಅದನ್ನು ವಜಾಗೊಳಿಸಲಾಗುತ್ತದೆ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ಹೇಳಿದೆ. ಅಂದಿನ ಸಭೆಯಲ್ಲಿ ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ಹಿರಿಯ ನ್ಯಾಯಾಧೀಶರಾದ ಮದನ್ ಬಿ ಲೋಕುರ್, ಎಕೆ ಸಿಕ್ರಿ, ಎಸ್‌ಎ ಬೋಬ್ಡೆ ಮತ್ತು ಎನ್‌ವಿ ರಮಣ ಭಾಗಿಯಾಗಿದ್ದು ನ್ಯಾಯಾಧೀಶರ ನೇಮಕಾತಿ ಕುರಿತು ಕೆಲವು ನಿರ್ಧಾರಗಳನ್ನು ತೆಗೆದುಕೊಂಡರು. ಸಭೆಯ ವಿವರಗಳನ್ನು ಸುಪ್ರೀಂಕೋರ್ಟ್ ಅಂತರ್ಜಾಲ ತಾಣದಲ್ಲಿ ಬಹಿರಂಗಪಡಿಸಲಾಗಿಲ್ಲ.   ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿಲ್ಲ. ನಂತರ ನಿರ್ಧಾರಗಳನ್ನು ರದ್ದುಗೊಳಿಸಲಾಯಿತು ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠ ಹೇಳಿದೆ.

Donate Janashakthi Media

Leave a Reply

Your email address will not be published. Required fields are marked *