ಕವಿತಾಳ | ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸಿಂಧೂ ಪರಿಶೀಲನೆ

ಕವಿತಾಳ: ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸಿಂಧೂ ಅವರು ಸಮೀಪದ ಬಾಗಲವಾಡ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಪರಿಶೀಲಿಸಿದರು.

ಇದನ್ನೂ ಓದಿ: ಬೆಂಗಳೂರು | ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-II ಸಮರ್ಪಕವಾಗಿ ನಡೆಸುವಂತೆ ಆಗ್ರಹ

ಬಾಗಲವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡುಗಡ್ಡೆ ಕ್ಯಾಂಪ್‌ನಲ್ಲಿ 2023-24ನೇ ಸಾಲಿನ ಅಂದಾಜು ₹15 ಲಕ್ಷ ಎಸ್‌ಸಿಪಿ, ಟಿಎಸ್‌ಪಿ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರು ವಾಸಿಸದ ಕಡೆ, ಖಾಸಗಿ ವ್ಯಕ್ತಿಯ ಜಮೀನಿಗೆ ಸಂಪರ್ಕಿಸುವ ಕಡೆ ಕಾಂಕ್ರೀಟ್‌ ರಸ್ತೆ ನಿರ್ಮಿಸಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ (ಭೀಮವಾದ) ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ದೂರು ನೀಡಿದ್ದರು.

ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಸ್ಥಳಕ್ಕೆ ಭೇಟಿ ನೀಡಿದ ಉಪನಿರ್ದೇಶಕಿ ಕಾಮಗಾರಿ ಪರಿಶೀಲಿಸಿ ದೂರುದಾರರು ಮತ್ತು ಸ್ಥಳೀಯರಿಂದ ಮಾಹಿತಿ ಪಡೆದರು. ಈ ಕುರಿತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಪನಿರ್ದೇಶಕಿ ಸಿಂಧೂ ತಿಳಿಸಿದರು.

ಸಂಘಟನೆ ಮುಖಂಡರಾದ ಗಂಗಾಧರ ಬಾಗಲವಾಡ, ನಾಗರಾಜ ಹಿಂದಿನಮನಿ, ಮೌನೇಶ ಕೋರಿ, ಜಗದೀಶ ಸಾಲಮನಿ ಮತ್ತು ನಾಗರಾಜ ಭೋವಿ ಉಪಸ್ಥಿತರಿದ್ದರು.

ಇದನ್ನೂ ನೋಡಿ: ಸಾಂಸ್ಕೃತಿಕ ಲೋಕದ ಮುಖ್ಯ ಉಸಿರು ಸಮುದಾಯ ; ಬರಗೂರು ರಾಮಚಂದ್ರಪ್ಪ Janashakthi Media

Donate Janashakthi Media

Leave a Reply

Your email address will not be published. Required fields are marked *