ಶೇ. 40ರ ಭ್ರಷ್ಟ ಸರ್ಕಾರ ತೊಲಗಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು: ಎಂ.ಬಿ.ಪಾಟೀಲ ಹೇಳಿಕೆ

ವಿಜಯಪುರ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಬಹುತೇಕ ಸಚಿವರು ಶೇ. 40ರಷ್ಟು ಲಂಚ ಪಡೆದುಕೊಳ್ಳುತ್ತಿದ್ದಾರೆಂದು ಗುತ್ತಿಗೆದಾರರ ಸಂಘದ ಆರೋಪವಾಗಿದೆ. ಬಿಜೆಪಿ ಆಡಳಿತದಿಂದಾಗಿ ಇಡೀ ವ್ಯವಸ್ಥೆ ಹಾಳಾಗಿದೆ. ರಾಜ್ಯಕ್ಕೆ ನಂ. 1 ಆಗಿ ಗತವೈಭವ ಮರುಕಳಿಸಬೇಕಾದರೆ, ಶೇ. 40ರ ಭ್ರಷ್ಟಾ ಸರ್ಕಾರ ತೊಲಗಲೇ ಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸರಿಪಡಿಸಲು ನಮಗೆ ಎರಡು ವರ್ಷಬೇಕು. ಆದಷ್ಟು ಬೇಗ ಈ ಭ್ರಷ್ಟ ಸರ್ಕಾರ ತೊಲಗಬೇಕು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷ ಆಡಳಿತಕ್ಕೆ ತರಬೇಕಿದೆ. ಭವ್ಯ ಸಂಸ್ಕೃತಿ, ಇತಿಹಾಸ ನಮ್ಮ ರಾಜ್ಯ ಹೊಂದಿದೆ. ಅದನ್ನು ಉಳಿಸಿಕೊಂಡು ಹೋಗಲು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಜನಸಾಗರವನ್ನು ನೀವೆಲ್ಲ ನೋಡಿದ್ದಿರಿ. ಆದರೆ ಬಿಜೆಪಿ ಸಂಕಲ್ಪಯಾತ್ರೆಯಲ್ಲಿ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಸ್ಮತಿ ಇರಾನಿ ಮಾತನಾಡುವಾಗ ಖಾಲಿ ಕುರ್ಚಿಗಳಿದ್ದವು. ಖಾಲಿ ಕುರ್ಚಿಗಳನ್ನು ತೋರಿಸಿ ಲಕ್ಷಾಂತರ ಜನ ಎಂದು ತೋರಿಸಿದ್ದಾರೆ. ಬೇಕಿದ್ದರೆ ಖಾಲಿ ಕುರ್ಚಿಗಳ ವಿಡಿಯೋ ಸಾಕ್ಷಿ ಕೊಡುತ್ತೇನೆ ಎಂದು ಕುಟುಕಿದರು.

ಪಿಎಸ್‌ಐ ನೇಮಕಾತಿ ಅಕ್ರಮ ಹಗರಣ ತನಿಖೆ ನಿಷ್ಪಕ್ಷಪಾತದಿಂದ ಪೂರ್ಣಗೊಳ್ಳಲಿ

ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಅಕ್ರಮ ಪ್ರಕರಣ ತನಿಖೆ ನಡೆಸುತ್ತಿರುವ ಸಿಐಡಿ ಎರಡು-ಮೂರು ತಿಂಗಳಲ್ಲಿ ನಿಷ್ಪಕ್ಷಪಾತವಾದ ತನಿಖೆ ಮಾಡಿ ನಿರಪರಾಧಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಎಂ.ಬಿ.ಪಾಟೀಲ ಆಗ್ರಹಿಸಿದರು.

ಪಿಎಸ್‌ಐ ಒಂದೇ ಅಲ್ಲ ಇನ್ನೂ ಬೇರೆ ಬೇರೆ ಹಗರಣಗಳು ಹೊರಬರುತ್ತಿವೆ. ತಪ್ಪಿತಸ್ಥರನ್ನು ತೆಗೆದು ಹಾಕಿ ಕಷ್ಟಪಟ್ಟು ಹಗಲು-ರಾತ್ರಿ ಓದಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ನ್ಯಾಯ ದೊರಕಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.

Donate Janashakthi Media

Leave a Reply

Your email address will not be published. Required fields are marked *