ವಿಜಯನಗರ: ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಘಟಿಕೋತ್ಸವ ಪ್ರಮಾಣ ಪತ್ರ ಮತ್ತು ಇತರೆ ನಕಲಿ ದಾಖಲೆ ಯನ್ನು ಸೃಷ್ಟಿಸಿ ವಿಶ್ವವಿದ್ಯಾಲಯಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸುವಂತೆ ಮಾಡಿದ ಕ್ರಿಮಿನಲ್ ಗಳ ಜಾಲವನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಿ ನಷ್ಟವನ್ನು ಬರಿಸುವಂತೆ, ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್ ಇವರಿಗೆ SFI ವಿಜಯನಗರ ಜಿಲ್ಲಾ ಸಮಿತಿ ವತಿಯಿಂದ ಮನವಿ ಪತ್ರವನ್ನು ಸಲ್ಲಿಸಲಾಯಿತು. ಜಾಲ
ಈ ಸಂದರ್ಭದಲ್ಲಿ SFI ಜಿಲ್ಲಾ ಕಾರ್ಯದರ್ಶಿಯಾದ ಶಿವರೆಡ್ಡಿ ಮಾತನಾಡಿ ಶ್ರೀ ಕೃಷ್ಣದೇವರಾಯ ವಿಜಯನಗರ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವದ ಪ್ರಮಾಣ ಪತ್ರವು ನಕಲಿ ಸಹಿಯಿಂದ ಒಟ್ಟು 3,330 ನಕಲಿ ದಾಖಲೆಗಳನ್ನು ಸೃಷ್ಟಿಸಿ ವಿದ್ಯಾರ್ಥಿಗಂದ ಹಣವನ್ನು ವಸಲಿ ಮಾಡಿ ನಕಲಿ ಘಟಿಕೋತ್ಸವ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ಹಂಚಲಾಗಿದೆ, ಮತ್ತು ಒಂದೊಂದು ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ಕನಿಷ್ಠ 8 ಸಾವಿರಕ್ಕೂ ಹೆಚ್ಚಿನ ಹಣವನ್ನು ವಿದ್ಯಾರ್ಥಿಗಳಿಂದ ಸಂಗ್ರಹಣೆ ಮಾಡಿದ್ದಾರೆ.
ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ಹೊಂದಿರುವ ಗ್ರಾಹಕರಿಗೆ ಸಿಹಿ ಸುದ್ದಿ
ಹಾಗೂ ಇದೆ ವರ್ಷ ಫೆಬ್ರವರಿಯಲ್ಲಿ ಘಟಿಕೋತ್ಸವ ಪ್ರಮಾಣ ಪತ್ರ ಹಗರಣವು ಬೆಳಕಿಗೆ ಬಂದಿದ್ದು ಆದರೆ ಇಲ್ಲಿವರೆಗೂ ಯಾವದೇ ಕಾನೂನು ಕ್ರಮ ಜರುಗಿಸದೇ ಇರುವುದು ಖಂಡನೀಯವಾದದ್ದು. ಇದರಿಂದ ವಿದ್ಯಾರ್ಥಿಗಳಿಗೆ ಕ್ರಿಮಿನಲ್ಗಳು ಮೋಸ ಎಸಗಿದ್ದಾರೆ. ಇದರಿಂದಾಗಿ ವಿಶ್ವವಿದ್ಯಾಲಯದ ಬೊಕ್ಕಸಕ್ಕೂ ಕೋಟಿಗಟ್ಟಲೆ ಹಣ ನಷ್ಟವಾಗಿದೆ.
ಇದರಿಂದ ವಿದ್ಯಾಥಿಗಳು ಹೆಚ್ಚಿನ ಹಣವನ್ನು ಶುಲ್ಕದ ರೂಪದಲ್ಲಿ ಕಟ್ಟಬೇಕಾಗಿದೆ. ಆದ್ದರಿಂದ ಇದರ ಹಿಂದೆ ಇರುವ ಕ್ರಿಮಿನಲ್ ಗಳ ಜಾಲ ಕೂಡಲೆ ಪತ್ತೆ ಮಾಡಬೇಕು. ಇದೇ ವಿಶ್ವವಿದ್ಯಾಲಯದಲ್ಲಿ 2015-16 ನೇ ಸಾಲಿನಲ್ಲಿ ನಕಲಿ ಅಂಕಪಟ್ಟಿಯ ಪ್ರಕರಣ ಬೆಳಕಿಗೆ ಬಂದಿತ್ತು.
ಇಲ್ಲಿಯೂ ಸಾಕಷ್ಟು ಹಣ ವಿಶ್ವವಿದ್ಯಾಲಯಕ್ಕೆ ಹಾಗೂ ವಿದ್ಯಾರ್ಥಿಗಳಿಗೆ ನಷ್ಟ ಸಂಭವಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಮಸ್ಯೆ ಎದುರಾಗಿತ್ತು. ಪದೇ ಪದೇ ಸಂಭವಿಸುವ ಇಂತಹ ಪ್ರಕರಣವನ್ನು ಕೂಡಲೆ ಪತ್ತಿ ಹಚ್ಚಿ ಕಲುಶಿತಗೊಂಡ ಶಿಕ್ಷಣ ವ್ಯವಸ್ಥೆಯ ಆಡಳಿತವನ್ನು ಶುದ್ಧಗೊಳಿಸಬೇಕು ಎಂದು SFI ಒತ್ತಾಯಿಸಿದೆ.
ಇದಕ್ಕೆ ಸಂಬಂಧಸಿದವರನ್ನು ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸಿ, ಕಠಿಣ ಕಾನೂನು ಕ್ರಮ ಜರುಗಿಸಲು SFI ಒತ್ತಾಯ ಮಾಡುತ್ತೇವೆ ಮತ್ತು ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಪ್ರಮಾಣ ಪತ್ರ ಉಚಿತವಾಗಿ ಕೊಡಬೇಕೆಂದು ಒತ್ತಾಯಸುತ್ತದೆ.
ಈ ಸಂದರ್ಭದಲ್ಲಿ SFI ರಾಜ್ಯ ಸಮಿತಿ ಸದ್ಯಸರು ವಿರೇಶ್ ರಾಠೋಡ್, ಜಿಲ್ಲಾ ಮುಖಂಡರಾದ ಮಹಾಲಿಂಗ, ವೆಂಕಟೇಶ್ ಇತರರು ಉಪಸ್ಥಿತರಿದ್ದರು.
ಇದನ್ನೂ ನೋಡಿ: ಬಾನು ಮುಷ್ತಾಕ್ಗೆ ಬೂಕರ್ ಪ್ರಶಸ್ತಿ | ಮೂಲಭೂತವಾದಿಗಳಿಗೆ ಕಪಾಳಮೋಕ್ಷ – ಕೆ.ವಿ.ಪ್ರಭಾಕರ್ Janashakthi Media