ಶಾಶ್ವತ ಕುಡಿಯುವ ನೀರಿಗೆ ಆಗ್ರಹಿಸಿ ಮರಿಯಮ್ಮನಹಳ್ಳಿ ಬಂದ್‌

ಹೊಸಪೇಟೆ: ಕುಡಿಯುವ ನೀರು ಒದಗಿಸಬೇಕೆಂದು ಆಗ್ರಹಿಸಿ ಮರಿಯಮ್ಮನಹಳ್ಳಿ ಪಟ್ಟಣ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಜನತೆಗೆ ಶಾಶ್ವತವಾದ ಕುಡಿಯುವ ನೀರು ಒದಗಿಸಬೇಕೆಂದು ವಿವಿಧ ಸಂಘ ಸಂಸ್ಥೆಗಳನ್ನು ಒಳಗೊಂಡ ಶಾಶ್ವತ ಕುಡಿಯುವ ನೀರಿನ ಹೋರಾಟ ಸಮಿತಿ ನೇತೃತ್ವದಲ್ಲಿ ಬಂದ್‌ ನಡೆದಿದೆ. ಸಮಿತಿಯ ನೂರಾರು ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ನಂತರ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾ ಸ್ಥಳಕ್ಕೆ ದಿಢೀರನೆ ಭೇಟಿ ನೀಡಿದ ಪ್ರವಾಸೋದ್ಯಮ  ಸಚಿವ ಆನಂದ್ ಸಿಂಗ್, ಸರ್ಕಾರವೇ ನಮ್ಮದಿರುವಾಗ ಹೋರಾಟ ಮಾಡುವ ಅವಶ್ಯಕತೆಯಿಲ್ಲ. ಮುಖ್ಯಮಂತ್ರಿ ಅವರೊಂದಿಗೆ ಮೌಖಿಕವಾಗಿ ಆಗಲೇ ಚರ್ಚೆ ಮಾಡಿದ್ದೇವೆ. ಡಿಪಿಆರ್ ಮಾಡುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸದ್ಯದಲ್ಲೇ ಡಿಪಿಆರ್ ಮಾಡಿ ಮರಿಯಮ್ಮನಹಳ್ಳಿ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಿಗೆ ನೀರಿನ ವ್ಯವಸ್ಥೆ ಮಾಡುತ್ತೇವೆ ಎಂದರು.

ಪ್ರತಿಭಟನಾಕಾರರು, ಸಚಿವರಿಗೆ, ಪಾವಗಡಕ್ಕೆ ನೀರು ಕೊಡೋದಕ್ಕೂ ಮೊದಲು ನಮಗೆ ನೀರು ಕೊಡಿ. ಈ ಕೆಲಸ ಮಾಡದಿದ್ದರೆ, ನಮ್ಮ ಹೋರಾಟ ತೀವ್ರಗೊಳ್ಳಲಿದೆ ಎಂದು ಹೇಳಿದರು.

Donate Janashakthi Media

Leave a Reply

Your email address will not be published. Required fields are marked *