ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಿಸುತ್ತಿರುವ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಸೌಕರ್ಯಗಳಲ್ಲಿ ಮೃತ ದೇಹದ ಅಗತ್ಯತೆಯೂ ಒಂದಾಗಿದೆ. ಆದರೆ, ರಾಜ್ಯದ ಬಹುತೇಕ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಅಂಗರಚನಾಶಾಸ್ತ್ರ ಅಧ್ಯಯನಕ್ಕೆ ಬೇಕಾಗಿರುವ ಮೃತದೇಹದ ಕೊರತೆ ಕಾಡುತ್ತಿದೆ.
ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಮೃತದೇಹಗಳು ಸಿಗದಿರುವುದು ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಡಕಗಾಗಿದೆ.
ರಾಜ್ಯದಲ್ಲಿ ಶವಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳ ಪ್ರಾಯೋಗಿಕ ಕೌಶಲ್ಯಗಳು ಮತ್ತು ಅಂಗರಚನಾಶಾಸ್ತ್ರದ ಜ್ಞಾನವನ್ನು ಕಡಿಮೆ ಮಾಡುತ್ತದೆ. ಶಸ್ತ್ರಚಿಕಿತ್ಸೆಗಳು ಮತ್ತು ಇತರ ವೈದ್ಯಕೀಯ ಕಾರ್ಯವಿಧಾನಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವೈದ್ಯಕೀಯ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ. ಇದು ಭವಿಷ್ಯದ ವೈದ್ಯರ ಸಾಮರ್ಥ್ಯವನ್ನು ಕಡಿಮೆ ಮಾಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶವಗಳ ಅಗತ್ಯ ಇದೆ.
ಇದನ್ನೂ ಓದಿ: ಸಾರ್ವತ್ರಿಕ ಪಿಂಚಣಿ ನಮ್ಮ ಬೇಡಿಕೆಯಾಗಬೇಕು
ರಾಜ್ಯದ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ಈ ಹಿಂದೆ ರಾಜ್ಯದಲ್ಲಿ 25ಕ್ಕಿಂತ ಹೆಚ್ಚು ವೈದ್ಯಕೀಯ ಕಾಲೇಜುಗಳಿದ್ದವು. ಇದೀಗ ಇವುಗಳ ಸಂಖ್ಯೆ 75ಕ್ಕಿಂತ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಪ್ರತಿ ವೈದ್ಯಕೀಯ ಕಾಲೇಜಿಗೆ 100 ರಿಂದ 150 ವಿದ್ಯಾರ್ಥಿಗಳ ದಾಖಲಾಗುತ್ತವೆ. ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಅಂಗರಚನಾಶಾಸ್ತ್ರದ ಅಧ್ಯಯನ ಬಹಳ ಮಹತ್ವದ್ದಾಗಿದೆ. ಮನುಷ್ಯನ ದೇಹದ ಪ್ರತಿಯೊಂದು ಅಂಗದ ಬಗ್ಗೆ ವಿವರಿಸಿ, ತರಬೇತಿ ನೀಡಲಾಗುತ್ತದೆ. ಮೃತದೇಹಗಳ ಕೊರತೆ ಉಂಟಾದರೆ ವಿದ್ಯಾರ್ಥಿಗಳ ಓದಿನ ಮೇಲೆ ಪರಿಣಾಮ ಉಂಟಾಗುತ್ತದೆ. ಸರ್ಕಾರಗಳೂ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದಾನಿಗಳು ಮುಂದೆ ಬಂದು ದೇಹದಾನದ ವಾಗ್ದಾನ ನೀಡಬೇಕು ಎಂದು ಹಲವು ವೈದ್ಯಕೀಯ ಕಾಲೇಜುಗಳ ಉಪನ್ಯಾಸಕರ ಅಭಿಪ್ರಾಯವಾಗಿದೆ.
ಭಾರತೀಯ ವೈದ್ಯಕೀಯ ಮಂಡಳಿಯ ನಿಯಮಗಳ ಪ್ರಕಾರ, 1.4ರ ಪ್ರಮಾಣದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಮೃತ ದೇಹಗಳ ಅಗತ್ಯ ಇದೆ. 10 ವಿದ್ಯಾರ್ಥಿಗಳಿಗೆ ಅಧ್ಯಯನ, ಸಂಶೋಧನೆ ಉದ್ದೇಶಕ್ಕೆ ಕನಿಷ್ಠ ಒಂದು ಮೃತದೇಹ ಬೇಕು. ಆದರೆ, ಹಲವು ವೈದ್ಯಕೀಯ ಕಾಲೇಜುಗಳಲ್ಲಿ ಈ ಪ್ರಮಾಣದಲ್ಲಿ ಲಭ್ಯವಾಗುತ್ತಿಲ್ಲ. 25 ರಿಂದ 30 ವಿದ್ಯಾರ್ಥಿಗಳು ಒಂದು ಮೃತದೇಹದಲ್ಲಿ ಅಧ್ಯಯನ ನಡೆಸಲಾಗುತ್ತಿದೆ. ಇದರಿಂದ ಆಳ ಅಧ್ಯಯನ, ಸಂಶೋಧನೆಗೆ ತೊಡಕಾಗುತ್ತಿದೆ ಎಂದು ಹೇಳಲಾಗಿದೆ.
ಇದನ್ನೂ ನೋಡಿ: ಹಲ್ಮಿಡಿ ಶಾಸನದಿಂದ ಬೂಕರ್ವರೆಗೆ ಹಾಸನದ ಕೊಡುಗೆ: ಬರಗೂರುJanashakthi Media