ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಶ್ವವಿಖ್ಯಾತ

ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ 515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು.

ಇದನ್ನೂ ಓದಿ: ಡೆಂಗ್ಯೂ ಪತ್ತೆಗೆ ಬಿಬಿಎಂಪಿಯಿಂದ ಮನೆಮನೆ ಸಮೀಕ್ಷೆ

ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. ವೃತ್ತಿಯಾಧಾ ರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ, ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ಪ್ರಯತ್ನಪಟ್ಟ ರು ಎಂದರು.

ಕೆಂಪೇಗೌಡರ ಆಡಳಿತ ನಮಗೆ ಪ್ರೇರಣೆ: 

ಮೊದಲಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸ್ಮರಿಸಿದರು. ಕೆಂಪೇಗೌಡರ ಅವರ ಆಡಳಿತ ನಮಗೆಲ್ಲಾ ಪ್ರೇರಣೆಯಾಗಿದೆ ಎಂದರು.

ಇದನ್ನೂ ನೋಡಿ: 100 ರೂಪಾಯಿ ಘನತ್ಯಾಜ್ಯ ಸೇವಾ ಶುಲ್ಕ : ಕಸ ಮಾಫಿಯಾದ ಕೈವಾಡ Janashakthi Media

Donate Janashakthi Media

Leave a Reply

Your email address will not be published. Required fields are marked *