ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸದಿದ್ದಲ್ಲಿ ಆತ್ಮಹತ್ಯೆ : ಅಭಿಮಾನಿಗಳಿಂದ ಎಚ್ಚರಿಕೆ

ಬೆಂಗಳೂರು : ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಇಂದು ಬೆಂಗಳೂರಿನ ಅವರ ಸರ್ಕಾರಿ ನಿವಾಸದ ಮನೆ ಮುಂದೆ ರಾಜಕೀಯ  ಹೈಡ್ರಾಮಾ ನಡೆದಿದೆ.

ಕೋಲಾರ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧಿಸಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ ಈ ಮೂಲಕ ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಶರ್ಟ್​ ಬಿಚ್ಚಿ ಬಾರುಕೋಲಿನಿಂದ ಅಭಿಮಾನಿ ಹೊಡೆದುಕೊಂಡು ತಮ್ಮ ಬೆಂಬಲವನ್ನು ಸೂಚಿಸಿದ್ದು ವಿಚಿತ್ರವಾಗಿದ್ದು. ಸಿದ್ದರಾಮಯ್ಯ ನಿವಾಸದ ಮುಂದೆ ಕಾರ್ಯಕರ್ತರು ಜಮಾಯಿಸಿದ್ದಾರೆ.

ನನ್ನ ನಿರ್ಧಾರ ನಾಳೆ ತಿಳಿಸುತ್ತೇನೆ :
ಹೈಕಮಾಂಡ್ ಎಲ್ಲಿ ಸ್ಪರ್ಧಿಸುವಂತೆ ಸೂಚಿಸುತ್ತದೋ ಅಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ. ಹೈಕಮಾಂಡ್ ಬಳಿ ಕೇಳಿ ನಿಮಗೆ ತಿಳಿಸುತ್ತೇನೆ ಎಂದು ಮಂಗಳವಾರ ಕೋಲಾರದಿಂದ ಬಂದ ಅಭಿಮಾನಿಗಳಿಗೆ ಹೇಳಿದ್ದೇನೆ. ನನ್ನ ಕುಟುಂಬ ಸದಸ್ಯರು, ಹಿತೈಷಿಗಳ, ರಾಜಕೀಯ ಮುಖಂಡರ ಜೊತೆ ಕೂಡ ಚರ್ಚಿಸುತ್ತೇನೆ, ಕೋಲಾರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ ಎಂದು ತಿಳಿಸಿದರು. ರಾಹುಲ್ ಗಾಂಧಿಯವರು ಒಂದೇ ಕಡೆಗೆ ಅಂಟಿಕೊಂಡು ಇರಬೇಡಿ, 1% ರಿಸ್ಕ್ ಕೂಡ ಬೇಡ ಎಂದಿದ್ದಾರೆ. ಇಡೀ ರಾಜ್ಯಕ್ಕೆ ಸಂಬಂಧಿಸಿದ ನಾಯಕರು ನೀವು, ಇಡೀ ರಾಜ್ಯ ಸುತ್ತಾಡಿ, ಜನಾಭಿಪ್ರಾಯ ಹೇಗಿದೆ ಎಂದು ತಿಳಿದುಕೊಂಡು ಒಂದು ಕ್ಷೇತ್ರ  ಆಯ್ಕೆ ಮಾಡಿಕೊಳ್ಳಿ, ನನ್ನ ನಿರ್ಧಾರ ನಾಳೆ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ : ಚುನಾವಣೆಗೆ ಕ್ಷೇತ್ರ ಘೋಷಿಸಿದ ಸಿದ್ದರಾಮಯ್ಯ!

ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿ ಬರುತ್ತಿದ್ದಂತೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಗೊಂದಲಕ್ಕೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ ಹೀಗಾಗಿ ಸಿದ್ದರಾಮಯ್ಯ ಅವರು ಕೋಲಾರದಲ್ಲೇ ಸ್ಪರ್ಧಿಸಬೇಕೆಂದು ಒತ್ತಾಯಿಸಿ ಒಕ್ಕಲಿಗರ ಮುಖಂಡರು, ಕುರುಬ ಸಮುದಾಯದವರು ಸೇರಿದಂತೆ ಎಲ್ಲಾ ಸಮುದಾಯದ ರೈತರು ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *