ಪಂಜಾಬ್ ಚುನಾವಣೆ: ನವಜೋತ್ ಸಿಂಗ್ ಸಿಧು, ಭಗವಂತ್ ಮಾನ್ ನಾಮಪತ್ರ ಸಲ್ಲಿಕೆ

ಚಂಡೀಗಢ: ಮುಂಬರುವ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿರುವ ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಇಂದು ನಾಮಪತ್ರ ಸಲ್ಲಿಸಿದರು.

ಸಿಧು ಅವರು ಚುನಾವಣಾ ಆಯೋಗದ ಕಚೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಆಗಮಿಸಿ  ಸಲ್ಲಿಸಿದರು.

ಸಿಧು ಅಮೃತಸರ ಪೂರ್ವ ಕ್ಷೇತ್ರದ ಹಾಲಿ ಶಾಸಕರು, ಅವರ ವಿರುದ್ಧ ಶಿರೋಮಣಿ ಅಕಾಲಿದಳ ಪಂಜಾಬ್‌ನ ಮಾಜಿ ಸಚಿವ ಬಿಕ್ರಮ್‌ ಸಿಂಗ್‌ ಮಜಿಥಿಯಾ ಅವರು ಸ್ಪರ್ಧಿಸಿದ್ದಾರೆ. ಅವರು ನೆನ್ನೆ ನಾಮಪತ್ರವನ್ನು ಸಲ್ಲಿಸಿದರು.

ಆಮ್‌ ಆದ್ಮಿ ಪಕ್ಷ(ಎಎಪಿ)ದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್‌ ಮಾನ್‌ ಧುರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದು, ಅವರು ಎಸ್‌ಡಿಎಂ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಸಂಗ್ರೂರ್‌ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿರುವ ಭಗವಂತ್‌ ಮಾನ್‌ ವಿಧಾನಸಭಾ ಚುನಾವಣಾ ಕಣಕ್ಕೆ ಇಳಿದಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *