“ನಿಮ್ಮ ಅಜ್ಜಿಗೆ ಬಂದ ಪರಿಸ್ಥಿತಿ ನಿಮಗೆ ಬರುತ್ತದೆ” ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ

ನವದೆಹಲಿ: ಕಾಂಗ್ರೆಸ್​ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅಮೆರಿಕ ಪ್ರವಾಸದ ವೇಳೆ ಸರಣಿ ಸಂವಾದಗಳನ್ನು ನಡೆಸುತ್ತಿದ್ದು, ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಸಿಖ್​ ಸಮುದಾಯದ ಕುರಿತು ಹೇಳಿಕೆ ನೀಡಿದ್ದರು.

ಬಿಜೆಪಿ ಸೇರಿದಂತೆ ಸಿಖ್​ ಸಂಘಟನೆಗಳ ಆಕ್ರೋಶಕ್ಕೆ ಈ ಹೇಳಿಕೆ ಗುರಿಯಾಗಿತ್ತು. ರಾಹುಲ್​ ತಮ್ಮ ಹೇಳಿಕೆ ಸಂಬಂಧ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.

ರಾಹುಲ್​ ಗಾಂಧಿ ಹೇಳಿಕೆ ಖಂಡಿಸಿ ದೆಹಲಿಯಲ್ಲಿ ಸಿಖ್​ ಸಂಘಟನೆ ಪ್ರತಿಭಟನೆ ನಡೆಸುತ್ತಿತ್ತು. ಇದರಲ್ಲಿ ಭಾಗಿಯಾಗಿದ್ದ ಹಿರಿಯ ಬಿಜೆಪಿ ನಾಯಕ, ಮಾಜಿ ಶಾಸಕ ತರ್ವಿಂದರ್ ಸಿಂಗ್ ಮರ್ವಾ ಮಾತನಾಡಿದ್ದು ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ: ಸಿಎಂ ಕುರ್ಚಿ ಖಾಲಿ ಇದೆಯೇ?

ರಾಹುಲ್​ ಗಾಂಧಿ ಮಾತನಾಡಬೇಕಾದರೆ ಎಚ್ಚರವಹಿಸಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಿಮ್ಮ ಅಜ್ಜಿಗೆ ಬಂದ ಪರಿಸ್ಥಿತಿ ನಿಮಗೆ ಬರುತ್ತದೆ ಎಂದು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.

1984ರಲ್ಲಿ ನಡೆದ ಬ್ಲೂ ಸ್ಟಾರ್​ ಕಾರ್ಯಾಚರಣೆ ಬಳಿಕ ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರನ್ನು ಅವರ ಅಂಗರಕ್ಷಕರೇ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಅಮೆರಿಕ ಪ್ರವಾಸದ ವೇಳೆ ಧಾರ್ಮಿಕ ಅಸಹಿಷ್ಣತೆ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮೊದಲು ಈ ಹೋರಾಟ ಏನೆಂಬುದನ್ನು ಅರ್ಥಮಾಡಿಕೊಳ್ಳಬೇಕು.

ಹೋರಾಟ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ, ಸಿಖ್ಖರಿಗೆ ಮಾತ್ರವಲ್ಲ ಎಲ್ಲ ಧರ್ಮದವರಿಗೂ ಸಂಬಂಧಿಸಿದ್ದು. ಒಂದು ವೇಳೆ ಪೇಟವನ್ನು ಧರಿಸಿ ಗುರುದ್ವಾರಕ್ಕೆ ಹೋಗಲು ಅನುಮತಿಸಲಾಗುವುದೇ ಎಂದು ಕೇಳುವ ಮೂಲಕ ರಾಹುಲ್​ ಗಾಂಧಿ ವಿವಾದದ ಕಿಡಿ ಹೊತ್ತಿಸಿದ್ದರು.

ಇದನ್ನೂ ನೋಡಿ: ಕಾಂಪ್ಲೆಕ್ಸ್ ತೆಗೆದು ಮಾಲ್ ಮಾಡಿದ್ರೆ ಜನರ ಆರೋಗ್ಯ ಹಾಳಾಗುತ್ತೆ | ಬಿಡಿಎ ನಮ್ಮ ಸ್ವತ್ತು ಖಾಸಗೀಯವರಿಗೆ ಕೊಡೋದಿಲ್ಲ

Donate Janashakthi Media

Leave a Reply

Your email address will not be published. Required fields are marked *