ಮಂಗಳೂರು : ಶವ ಹೂತಿಟ್ಟ ಪ್ರಕರಣಕ್ಕೆ ಧರ್ಮಸ್ಥಳ ಗ್ರಾಮದಲ್ಲಿ ಇಂದು ರೋಚಕ ತಿರುವು ಸಿಗುವ ಸಾಧ್ಯತೆಯಿದೆ. 13ನೇ ಪಾಯಿಂಟ್ನಲ್ಲಿ ಇಂದು ಕಾರ್ಯಾಚರಣೆ ನಡೆಯುತ್ತಿದೆ. ಧರ್ಮಸ್ಥಳ
SIT ತನಿಖಾಧಿಕಾರಿ ಜಿತೇಂದ್ರ ಕುಮಾರ್ ಡಿಯಲ್ ನೇತೃತ್ವದಲ್ಲಿ 13ನೇ ಪಾಯಿಂಟ್ನಲ್ಲಿ ಸಾಕಷ್ಟು ಕಳೇಬರಹ ಪತ್ತೆಯಾಗುವ ಸಾಧ್ಯತೆಯಿದೆ. ಇದೀಗ 6 ಸ್ಥಳೀಯರು SIT ಮುಂದೆ ಬರಲು ರೆಡಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ದಲಿತ ಮಹಿಳೆಯರು – ಯುವಕನ ಮೇಲೆ ಜಾತಿ ದೌರ್ಜನ್ಯ ಎಸಗಿರುವವರನ್ನು ಬಂಧಿಸಿ: ಡಿಎಚ್ಎಸ್
6 ಸ್ಥಳೀಯರು ಸಾಕ್ಷಿ ಹೇಳಲು ಮುಂದಾಗಿದ್ದು ಹೆಣ ಹೂತು ಹಾಕಿದ್ದನ್ನು ನೋಡಿದ್ದನ್ನು ಶೋಧಕಾರ್ಯಕ್ಕೆ ಸಹಾಯ ಮಾಡ್ತೇವೆಂದು ಮುಂದೆ ಬಂದಿದ್ದಾರೆ. SIT ಅಧಿಕೃತವಾಗಿ ಇಲ್ಲಿಯವರೆಗೆ ಯಾವುದೇ ಮಾಹಿತಿ ನೀಡಿಲ್ಲ. ಈ 6 ಜನರ ಹೇಳಿಕೆ ಸತ್ಯಾಸತ್ಯತೆ ಬಗ್ಗೆ ಚರ್ಚೆ ನಡೆಯಲಿದೆ.
SIT ಮುಖ್ಯಸ್ಥ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಬಂಟ್ವಾಳ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ DIG ಅನುಚೇತ್, ಜಿತೇಂದ್ರ ಕುಮಾರ್, AC ಸ್ಟೆಲ್ಲಾ ವರ್ಗೀಸ್, ಕಂದಾಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಸಭೆಯ ಬಳಿಕ ಉತ್ಖನನ ಕಾರ್ಯಾಚರಣೆ ಶುರು ಮಾಡುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ನೋಡಿ : ಶಾಲೆ, ಕಾಲೇಜು ಮತ್ತು ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ – ಎಸ್ಎಫ್ಐ ಪ್ರತಿಭಟನೆ Janashakthi
