ಜೂನ್ 1ಕ್ಕೆ ಹೊಳೆನರಸೀಪುರದ ನಿವಾಸದಲ್ಲಿರುವಂತೆ ಭವಾನಿ ರೇವಣ್ಣಗೆ ಎಸ್‌ಐಟಿ ನೊಟೀಸ್

ಬೆಂಗಳೂರು: ಭವಾನಿ ರೇವಣ್ಣಗೆ ವಿಶೇಷ ತನಿಖಾ ತಂಡ ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ನೊಟೀಸ್ ನೀಡಿದೆ.

‘ಮೊದಲು ನೀಡಿದ್ದ ನೊಟೀಸ್‌ಗೆ ಪ್ರತಿಕ್ರಿಯಿಸಿದ್ದ ಭವಾನಿ ರೇವಣ್ಣ, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದರಾದರೂ ಈ ಹಿಂದೆ ನೀಡಿದ್ದ ನೊಟೀಸ್‌ಗೆ ಉತ್ತರಿಸಿರಲಿಲ್ಲ. ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ’ ಎಂದು ಈಗ ನೊಟೀಸ್‌ನಲ್ಲಿ ಎಸ್‌ಐಟಿ ತಿಳಿಸಿದೆ.

ಇದನ್ನು ಓದಿ : ಫಿಟ್ ಎಂಡ್ ಫೈನ್ ಪ್ರಜ್ವಲ್‌ ರೇವಣ್ಣ

ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ನೀವು ಮನೆಯಲ್ಲಿ ಖುದ್ದು ಹಾಜರಿರಬೇಕು’ ಎಂದು ಎಸ್ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೀಡಿರುವ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

ಹಾಸನ ಸಂಸದ, ಮತ್ತು ತಮ್ಮ ಮಗ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇದನ್ನು ನೋಡಿ : ಮಣ್ಣಿನ ಮಕ್ಕಳು’ ಎಂದು ಹೇಳಿಕೊಂಡು ದೌರ್ಜನ್ಯ ನಡೆಸಿದ್ದೆ ಜಾಸ್ತಿ | ರೇವಣ್ಣ ರಿಪಬ್ಲಿಕ್Janashakthi Media

Donate Janashakthi Media

Leave a Reply

Your email address will not be published. Required fields are marked *