ನವದೆಹಲಿ: ಶಿಕ್ಷಣ ಕ್ಷೇತ್ರದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ವಿಶೇಷವಾಗಿ ಮರುಕಳಿಸುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು “ಔಟ್ ಆಫ್ ಬಾಕ್ಸ್” ಚಿಂತನೆ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಜುಲೈ 27ರಂದು ಅಭಿಪ್ರಾಯಪಟ್ಟಿದೆ. ಪೇಪರ್
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠದ ಮುಂದೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೇಹತಾ, ಶಿಕ್ಷಣ ಸುಧಾರಣೆಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದರು. ಇನ್ಫೋಸಿಸ್ನ ಮಾಜಿ ಕಾರ್ಯನಿರ್ವಹಣಾ ಅಧ್ಯಕ್ಷ ನಂದನ್ ನೀಲೇಕಣಿ ಅವರ ನೇತೃತ್ವದಲ್ಲಿ ಈ ಟಾಸ್ಕ್ ಫೋರ್ಸ್ ರಚನೆಯಾಗಿದ್ದು, ಸಂರಚನಾ ಸುಧಾರಣೆಗಳ ಬಗ್ಗೆ ಶಿಫಾರಸುಗಳನ್ನು ನೀಡಲಿದೆ ಎಂದು ಹೇಳಿದರು.
ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕೋರ್ಟ್ ವಿಚಾರಣೆ ನಡೆಸುತ್ತಿತ್ತು. ಆಗಸ್ಟ್ 3ರಂದು ನೀಟ್ ಪೇಪರ್ ಲೀಕ್ ಸಂಬಂಧಿತ ಅರ್ಜಿಗಳ ವಿಚಾರಣೆ ನಿಗದಿಯಾಗಿರುವುದರಿಂದ, ಈ ಅರ್ಜಿಯನ್ನೂ ಅದಕ್ಕೆ ಸೇರಿಸಿ ವಿಚಾರಣೆ ನಡೆಸಲು ಮೇಹತಾ ಮನವಿ ಮಾಡಿದರು. ಪೇಪರ್
ಇದನ್ನೂ ಓದಿ: ಪರೀಕ್ಷಾ ಅಕ್ರಮ ತಡೆ ಮಸೂದೆಗೆ ಒತ್ತಡ: ಚರ್ಚೆ ಇಲ್ಲದಿದ್ದರೂ ಅಂಗೀಕಾರ – ಸರ್ಕಾರ
ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದ ನ್ಯಾಯಪೀಠ, ಆನ್ಲೈನ್ ಪರೀಕ್ಷೆ ನಡೆಸಲು ಅಗತ್ಯವಾದ ಹೆಚ್ಚುವರಿ ಭದ್ರತಾ ಕ್ರಮಗಳು ಹಾಗೂ ಡೇಟಾ ಸುರಕ್ಷತೆಯನ್ನು ಸರ್ಕಾರ ಪರಿಶೀಲಿಸಬೇಕಿದೆ ಎಂದು ಸೂಚಿಸಿತು.
ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಯುವಕರ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ ಹಾಗೂ ಹೊಣೆಗಾರಿಕೆ ನಿಗದಿ ಮಾಡಿ ಸುಧಾರಣೆ ತರಬೇಕೆಂಬ ಬೇಡಿಕೆಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ, ಜುಲೈ 24ರಂದು ಸುಪ್ರೀಂ ಕೋರ್ಟ್ ವ್ಯವಸ್ಥೆಯ “ಅಡ್ಹಾಕ್ ಧೋರಣೆ ಆತಂಕಕಾರಿ” ಎಂದು ಹೇಳಿತ್ತು. ಈ ಸ್ಥಿತಿ ಮುಂದುವರಿಯಲು ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿ, ಸಮಸ್ಯೆಗಳನ್ನು ಪರಿಹರಿಸಿ ನೀಟ್ ಪರೀಕ್ಷೆಯನ್ನು ಸಂಪೂರ್ಣ ಸುರಕ್ಷಿತವಾಗಿಸಲು “ಹೆಚ್ಚುವರಿ ಪ್ರಯತ್ನ” ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.
“ನಾವು ಸಂಸ್ಥಾಪಿತ ವ್ಯವಸ್ಥೆಯತ್ತ ಗಮನ ಹರಿಸುತ್ತಿದ್ದೇವೆ. ಇದು ಅತ್ಯಂತ ಮುಖ್ಯ,” ಎಂದು ನ್ಯಾಯಪೀಠ ಹೇಳಿದ್ದು, ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವುದಾಗಿ ತಿಳಿಸಿದೆ.
ಇದನ್ನೂ ನೋಡಿ: ನೀಟ್ ಹೋರಾಟಕ್ಕೆ ಕಲೆಯ ಧ್ವನಿ! ಸೋನಂ ವಾಂಗ್ಚುಕ್ ಬೆಂಬಲಕ್ಕೆ ಚಿತ್ರ ಬಿಡಿಸಿದ ಬಿ.ಎಸ್. ದೇಸಾಯಿ Janashakthi Media
