ನೈಟ್‌ ಕರ್ಫ್ಯೂ ಅವೈಜ್ಞಾನಿಕ ಸೋಂಕು ನಿವಾರಿಸಲು ಮಾಸ್ಕ್‌ ಮುಖ್ಯ – ಸೌಮ್ಯ ಸ್ವಾಮಿನಾಥನ್

ನವದೆಹಲಿ: ರಾತ್ರಿ ಕರ್ಫ್ಯೂ ಹೇರುವುದರಿಂದ ಕೊರೊನಾ ವೈರಸ್‌ನ ರೂಪಾಂತರಗಳ ಹರಡುವಿಕೆ ತಡೆಯಬಹುದು ಎಂಬುದಕ್ಕೆ ವೈಜ್ಞಾನಿಕ ಆಧಾರಗಳಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ತಿಳಿಸಿದ್ದಾರೆ.

ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಸೋಂಕು ಹರಡುವಿಕೆ ತಡೆಯಲು ಭಾರತದಂಥ ದೇಶಗಳು ವೈಜ್ಞಾನಿಕ ಆಧಾರದಲ್ಲಿ ನೀತಿಗಳನ್ನು ರೂಪಿಸಬೇಕು. ಅದು ಬಿಟ್ಟು  ರಾತ್ರಿ ಕರ್ಫ್ಯೂನಂಥ ನಿರ್ಧಾರಗಳಿಗೆ ವೈಜ್ಞಾನಿಕ ಆಧಾರಗಳಿಲ್ಲ. ಸಾಕ್ಷ್ಯಾಧಾರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ನೈಟ್​ ಕರ್ಫ್ಯೂಗಳ ಹಿಂದೆ ಯಾವುದೇ ವಿಜ್ಞಾನವು ಅಡಗಿಲ್ಲ. ಸಾರ್ವಜನಿಕ ಆರೋಗ್ಯಕ್ಕೆ ಸೂಕ್ತವಾಗುವಂತಹ ಕ್ರಮಗಳನ್ನು ಕೈಗೊಳ್ಳಬೇಕು. ನಮ್ಮ ಬಳಿ ಕಳೆದ 2 ವರ್ಷಗಳಿಂದ ಸಾಕಷ್ಟು ಡೇಟಾ ಇದೆ ಎಂದು ಹೇಳಿದರು. ಮನರಂಜನಾ ಚಟುವಟಿಕೆಗಳು ನಡೆಯುವ ಪ್ರದೇಶಗಳಲ್ಲಿ ಸ್ವಲ್ಪಮಟ್ಟಿಗೆ ವೈರಸ್‌ ಹರಡುವಿಕೆ ಹೆಚ್ಚಿರುವುದು ನಿಜ. ಇಂಥ ಕಡೆಗಳಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸುವುದು ಸಹಜ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯರು ಸಿದ್ಧವಾಗಿರಬೇಕು, ಆದರೆ ಗಾಬರಿಬೀಳುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ‘ಭಾರತದಲ್ಲಿ ಓಮೈಕ್ರಾನ್ ಪ್ರಕರಣಗಳಲ್ಲಿ ಏರಿಕೆ ಕಾಣುವ ಸಾಧ್ಯತೆ ಇದೆ. ಈಗ ಕೆಲವು ನಗರಗಳಲ್ಲಿ ಓಮೈಕ್ರಾನ್‌ ಹರಡುವಿಕೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೋಂಕಿತರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *