ಅದಾನಿ ಬಂದರು ಡ್ರಗ್ಸ್-ಲಖಿಂಪುರ ಹಿಂಸಾಚಾರ ಮರೆಮಾಚಲು ಆರ್ಯನ್ ಖಾನ್ ಬಂಧನ ವಿಶಾಲ್​ ದದ್ಲಾನಿ

ಮುಂಬೈ: ಗುಜರಾತಿ ಅದಾನಿ ಬಂದರಿನಲ್ಲಿ ಸಿಕ್ಕ 3 ಸಾವಿರ ಕೆಜಿ ಡ್ರಗ್ಸ್​ ಮತ್ತು ಬಿಜೆಪಿ ಶಾಸಕನ ಮಗ ಮಾಡಿದ ರೈತರ ಕೊಲೆ ಪ್ರಕರಣವನ್ನು ಮರೆಮಾಚಲು ಶಾರುಖ್​ ಖಾನ್​ ಮತ್ತು ಅವರ ಕುಟುಂಬದವರ ಮೇಲೆ ಟಾರ್ಗೆಟ್​ ಮಾಡಲಾಗಿದೆ’ ಎಂದು ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ವಿಶಾಲ್​ ದದ್ಲಾನಿ ಹೇಳಿಕೊಂಡಿದ್ದಾರೆ.

‘ಕಳೆದ 30 ವರ್ಷದಲ್ಲಿ ಶಾರುಖ್​ ಖಾನ್​ ಜೊತೆ ಕೆಲಸ ಮಾಡಿದವರಲ್ಲಿ ಎಷ್ಟು ಜನರು ಈಗ ಅವರ ಪರವಾಗಿ ಇದ್ದೀರಿ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಡ್ರಗ್ಸ್​ ಪಾರ್ಟಿ ಮಾಡಿ ಎನ್‌​ಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್‌ ಬೆಂಬಲಿಸಿ ಈಗಾಗಲೇ ಹಲವು ಬಾಲಿವುಡ್ ಮಂದಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ನಡುವೆ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ವಿಶಾಲ್​ ದದ್ಲಾನಿ ಅವರು ಸೇರ್ಪಡೆಗೊಂಡಿದ್ದಾರೆ. ಆರ್ಯನ್​ ಖಾನ್​ ಬಂಧನ ಒಂದು ಸಂಚು ಎಂದು ಅವರು ಆರೋಪಿಸಿದ್ದಾರೆ.

ಈಗಾಗಲೇ ಫರ್ಹಾ ಖಾನ್​, ಶೇಖರ್​ ಸುಮನ್​, ಹೃತಿಕ್​ ರೋಷನ್​ ಸೇರಿದಂತೆ ಅನೇಕರು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ವಿಶಾಲ್​ ದದ್ಲಾನಿ ಅವರು ಶಾರುಖ್‌ ಖಾನ್‌ ಬೆಂಬಲಿಸುತ್ತಾ, ಕೊಂಚ ಖಾರವಾಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ವಿಶಾಲ್‌ ದದ್ಲಾನಿ ಶಾರುಖ್​ ಪುತ್ರನನ್ನು ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಸಿದ್ದರ ಹಿಂದೆ ದೊಡ್ಡ ಹುನ್ನಾರ ಇದೆ ಎಂಬ ಟ್ವೀಟರ್‌ ಸಂದೇಶ ಸಾಕಷ್ಟು  ವೈರಲ್​ ಆಗುತ್ತಿದೆ.

ಆರ್ಯನ್ ಖಾನ್ ಅವರೊಂದಿಗೆ 8 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಶುಕ್ರವಾರ ಜಾಮೀನು ಅರ್ಜಿಯ ವಿಚಾರಣೆ ವೇಳೆ ಮುಂಬೈನ ನ್ಯಾಯಾಲಯ ಜಾಮೀನು ನೀಡಲಿಲ್ಲ.

Donate Janashakthi Media

Leave a Reply

Your email address will not be published. Required fields are marked *