ಬೆಂಗಳೂರು: ರಾಜ್ಯ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ/ಜಿಬಿಎ) ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಕಾಲಾವಕಾಶ ಕೋರಿದೆ. ಜೂನ್ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್ನ ಈ ಹಿಂದಿನ ಆದೇಶದ ನಡುವೆಯೂ, ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 3 ತಿಂಗಳ ಕಾಲಾವಕಾಶ ನೀಡುವಂತೆ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಜಿಬಿಎ
ಪ್ರತ್ಯೇಕ ಅಫಿಡವಿಟ್ ಸಲ್ಲಿಕೆ:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ಗೆ ಪ್ರತ್ಯೇಕವಾಗಿ ಅಫಿಡವಿಟ್ಗಳನ್ನು ಸಲ್ಲಿಸಿವೆ.
ಚುನಾವಣೆ ನಡೆಸಲು ಈಗಿನ ಪರಿಸ್ಥಿತಿಯಲ್ಲಿ ತಾಂತ್ರಿಕ ಮತ್ತು ಆಡಳಿತಾತ್ಮಕ ಸವಾಲುಗಳಿರುವುದರಿಂದ, ಜೂನ್ ಅಂತ್ಯದ ಗಡುವನ್ನು ವಿಸ್ತರಿಸಿ ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ನೀಡಬೇಕು ಎಂಬುದು ಸರ್ಕಾರದ ಮುಖ್ಯ ಮನವಿಯಾಗಿದೆ.
ಇದನ್ನೂ ಓದಿ: ಜುಲೈ 1 ರಿಂದ MGNREGA ರದ್ದು: ಮೋದಿ ಸರ್ಕಾರ ಘೋಷಣೆ
ವಿಳಂಬಕ್ಕೆ ಕಾರಣವೇನು?
ರಾಜ್ಯ ಸರ್ಕಾರವು ತನ್ನ ಅಫಿಡವಿಟ್ನಲ್ಲಿ ಚುನಾವಣೆ ವಿಳಂಬಕ್ಕೆ ಪ್ರಮುಖ ಕಾರಣವೊಂದನ್ನು ನೀಡಿದೆ. ಪ್ರಸ್ತುತ ರಾಜ್ಯದ ಸರ್ಕಾರಿ ಸಿಬ್ಬಂದಿಗಳು ಜನಗಣತಿ ಕಾರ್ಯ ಹಾಗೂ ಎಸ್ಐಆರ್ (SIR) ಪ್ರಕ್ರಿಯೆಗಳಲ್ಲಿ ಸಂಪೂರ್ಣವಾಗಿ ನಿರತರಾಗಿದ್ದಾರೆ.
ಚುನಾವಣಾ ಕೆಲಸಗಳಿಗೆ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯ ಅಗತ್ಯವಿರುವುದರಿಂದ, ಜನಗಣತಿ ಕಾರ್ಯದ ನಡುವೆ ಚುನಾವಣೆ ನಡೆಸುವುದು ಕಷ್ಟಸಾಧ್ಯ ಎಂದು ಸರ್ಕಾರ ವಿವರಿಸಿದೆ.
ಸುಪ್ರೀಂ ಕೋರ್ಟ್ ಆದೇಶ ಏನಾಗಿತ್ತು?
ಈ ಹಿಂದೆ ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಮರುವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಜೂನ್ ತಿಂಗಳ ಒಳಗಾಗಿ ಕಡ್ಡಾಯವಾಗಿ ಚುನಾವಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿತ್ತು.
ಆದರೆ, ಸರ್ಕಾರದ ಈ ಹೊಸ ಮನವಿಯಿಂದಾಗಿ ಬೆಂಗಳೂರು ನಗರದ ಮತದಾರರು ಪಾಲಿಕೆ ಚುನಾವಣೆಗಾಗಿ ಇನ್ನೂ ಮೂರು ನಾಲ್ಕು ತಿಂಗಳು ಕಾಯುವಂತಾಗಿದೆ.
ಇದನ್ನೂ ನೋಡಿ: ಸಹಬಾಳ್ವೆಯೇ ಭಾರತದ ಶಕ್ತಿ: ಸರ್ವಧರ್ಮ ಸಮಾಜೋತ್ಸವದಲ್ಲಿ ಎಂಜಿ ಹೆಗಡೆ Janashakthi Media
