ನೆಲಕ್ಕುರುಳಿದ ಪ್ರಧಾನಿ ಮೋದಿ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ  ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಯ 35 ಅಡಿ ಎತ್ತರದ  ಪ್ರತಿಮೆ ಸೋಮವಾರ ನೆಲಕ್ಕುರುಳಿದೆ.

ಇಂದು (ಸೋಮವಾರ) ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್‌ ಕೋಟೆಯ ಬಳಿ ನಿರ್ಮಿಸಿದ್ದ ಪ್ರತಿಮೆ ನೆಲಕ್ಕುರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗುತ್ತಿದ್ದ ಕಾರಣ ಪ್ರತಿಮೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : ಮಹಿಳೆ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ: ಪ್ರಧಾನಿ ಮೋದಿ

2023ರ ಡಿ.4 ರಂದು ನೌಕಾ ದಿನದ ಹಿನ್ನೆಲೆ, ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ  ಮೋದಿ ಈ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಇದೀಗ ಕೇವಲ 9 ತಿಂಗಳಲ್ಲಿ ಪ್ರತಿಮೆ ಉರುಳಿ ಬಿದ್ದಿದೆ.

ಇದನ್ನು ನೋಡಿ : ಮೋದಿಯಿಂದ ಸಂವಿಧಾನಕ್ಕೆ ಕಂಟಕ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕಳವಳ ವ್ಯಕ್ತಪಡಿಸಿದ್ದಾರೆ Janashakthi Media

Donate Janashakthi Media

Leave a Reply

Your email address will not be published. Required fields are marked *