ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ; 23 ಆರೋಪಿಗಳ ಬಂಧನ

ದಾವಣಗೆರೆ: ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ ಪ್ರಕರಣದಲ್ಲಿ ಚನ್ನಗಿರಿ ಪೊಲೀಸರು ಭಾನುವಾರ 23 ಆರೋಪಿಗಳನ್ನು ಬಂಧಿಸಿದ್ದಾರೆ.

ಸಿ.ಸಿ.ಕ್ಯಾಮೆರಾ, ಮೊಬೈಲ್ ವಿಡಿಯೊ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಲು ತೂರಾಟ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿದ ಆರೋಪಿಗಳ ಬಂಧನಕ್ಕಾಗಿ ಎಸ್.ಪಿ ಉಮಾ ಪ್ರಶಾಂತ್ ಅವರು 5 ತಂಡಗಳನ್ನು ರಚಿಸಿದ್ದಾರೆ.

ಇದನ್ನು ಓದಿ : ಮೇ.31ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿ

ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ  ಠಾಣೆಗೆ ಕರೆದೊಯ್ದಿದ್ದಾಗಲೇ ಆರೋಪಿ ಆದಿಲ್ ಮೃತಪಟ್ಟಿದ್ದರು. ಆದಿಲ್ ಅವರದ್ದು, ಲಾಕಪ್ ಡೆತ್ ಎಂದು ಆರೋಪಿಸಿ ಸಂಬಂಧಿಕರು, ಸಮುದಾಯದವರು ಶುಕ್ರವಾರ ತಡರಾತ್ರಿ ಕಲ್ಲು ತೂರಾಟ ನಡೆಸಿದ್ದರು.

ಈ ವೇಳೆ 11 ಜನ ಪೊಲೀಸರಿಗೆ ಗಾಯಗಳಾಗಿವೆ. ಚನ್ನಗಿರಿಯಲ್ಲಿ ಪೊಲೀಸರ ಬಿಗಿ ಭದ್ರತೆ ಮುಂದುವರಿದಿದೆ‌.

ಇದನ್ನು ನೋಡಿ : “ಸಂವಿಧಾನ ಭಾರತ- ಧರ್ಮಕಾರಣ”ಎಂಬ ಆಶಯವಾಕ್ಯದೊಂದಿಗೆ ಮೇ ಸಹಿತ್ಯ ಮೇಳಕ್ಕೆ ಚಾಲನೆ Janashakthi Media

Donate Janashakthi Media

Leave a Reply

Your email address will not be published. Required fields are marked *