ಬಾಲಕಿಯ ಬಾಯಿಗೆ ಆ್ಯಸಿಡ್ ಸುರಿದು ಲೈಂಗಿಕ ದೌರ್ಜನ್ಯ; ಕತ್ತು ಸೀಳಿ ಭಯಾನಕ ವಿಕೃತಿ

ಅಂದ್ರಪ್ರದೇಶ : ಅಪ್ರಾಪ್ತ ಬಾಲಕಿಯ ಬಾಯಿಗೆ ಆ್ಯಸಿಡ್ ಸುರಿದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದು, ಇದಕ್ಕೆ ವಿರೋಧಿಸಿದ ಬಾಲಕಿಯ ಕತ್ತು ಸೀಳಿ ಲೈಂಗಿಕ ದೌರ್ಜನ್ಯ ಎಸುಗಿದ  ಭಯಂಕರ ಕೃತ್ಯವೊಂದು ಅಂದ್ರಪ್ರದೇಶ ದಲ್ಲಿ ವರದಿಯಾಗಿದೆ.

ದೌರ್ಜನ್ಯಕ್ಕೊಳಗಾದ ಬಾಲಕಿ(14  ವರ್ಷ) 9 ನೇ ತರಗತಿ ಓದುತಿದ್ದು, ಸೋಮವಾರ(ಸೆಪ್ಟೆಂಬರ್ 5) ರಾತ್ರಿ ಬಾಲಕಿಯೊಬ್ಬಳೆ ಮನೆಯಲ್ಲಿ ಇದ್ದ ಸಮಯದಲ್ಲಿ ಈ ದುಷ್ಕೃತ್ಯ ನಡೆದಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಚೆಮುಡುಗುಂಟದ ನಕ್ಕಲ ಗಿರಿಜನ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯ ಕತ್ತು ಸೀಳಿ ಆಸಿಡ್ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ನಾಗರಾಜು ಎಂದು ಗುರುತಿಸಿದ್ದು, ಈತ ಸಂತ್ರಸ್ತೆಯ ಹತ್ತಿರದ ಸಂಬಂಧಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಾಗರಾಜು ಎಂಬ ವ್ಯಕ್ತಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಕೆ ವಿರೋಧಿಸಿದಾಗ ತಾನು ತಂದಿದ್ದ ಆ್ಯಸಿಡ್ ಅನ್ನು ಬಾಲಕಿಯ ಬಾಯಿ ಹಾಗೂ ಮುಖದ ಮೇಲೆ ಸುರಿದಿದ್ದಾನೆ. ಬಳಿಕ ಚಾಕುವಿನಿಂದ ಆಕೆಯ ಕತ್ತು ಕೊಯ್ದು ಅಲ್ಲಿಂದ ಓಡಿ ಹೋಗಿದ್ದಾನೆ. ಬಾಲಕಿ ಕಿರುಚಿಕೊಂಡಾಗ ಅಕ್ಕಪಕ್ಕದ ಮನೆಯವರು ಅಲ್ಲಿಗೆ ಬಂದು ಆಕೆಯನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಆಂಧ್ರ ಪ್ರದೇಶ ರಾಜ್ಯ ಕೃಷಿ ಸಚಿವ ಕಾಕಣಿ ಗೋವರ್ಧನ್ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ವಿಚಾರಿಸಿದರು. ಪೊಲೀಸರು ಆರೋಪಿಗಳ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಯತ್ನದ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು. ಜಾಮೀನು ರಹಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಶೀಘ್ರದಲ್ಲೇ, ಪೊಲೀಸರು ಅಪರಾಧಿಗೆ ತಕ್ಕ ಶಕ್ಷೆ ನೀಡುವುದಾಗಿ ಆಂಧ್ರ ಪ್ರದೇಶ ರಾಜ್ಯ ಕೃಷಿ ಸಚಿವ ಕಾಕಣಿ ಗೋವರ್ಧನ್ ರೆಡ್ಡಿ ಹೇಳಿದ್ದಾರೆ. ಜೊತೆಗೆ ಕಠಿಣ ಶಿಕ್ಷೆಯನ್ನು ನೀಡಲು ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *