ಹಾಲ್ ಟಿಕೆಟ್ ಸಿಗದೇ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ

ಮೈಸೂರು: ಒಂದು ವಾರದಿಂದ ಪ್ರಾಂಶುಪಾಲರ ಬಳಿ ಎಷ್ಟೇ ಕೇಳಿಕೊಂಡರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ನಾನು ನನ್ನ ಜೀವನವನ್ನು ಕೊನೆ ಮಾಡಲು ನಿರ್ಧರಿಸಿದ್ದೇನೆ ಎಂದು ಹಾಲ್ ಟಿಕೆಟ್ ಸಿಗದಿರುವ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೈಸೂರಿನ ಜಯಲಕ್ಷ್ಮಿಪುರಂದಲ್ಲಿ ಈ ಘಟನೆ ನಡೆದಿದೆ. ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿನಿ ತನ್ಮಯಾ ಆತ್ಮಹತ್ಯೆಗೆ ಮುನ್ನ ವೀಡಿಯೋ ಮಾಡಿ ನ್ನ ಸಾವಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳೇ ಕಾರಣ ಎಂದು ಆರೋಪಿಸಿದ್ದಾಳೆ.

ಕಾಲೇಜಿನ ಪ್ರಾಂಶುಪಾಲರು ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲಾ, ನಮ್ಮ ಭವಿಷ್ಯ ಹಾಳಾಗುತ್ತೆ. ದಿನಾಲು ತರಗತಿಗಳಿಗೆ ಹಾಜರಾಗುತ್ತಿದ್ದರೂ, ಹಾಜರಾತಿ ನೀಡುತ್ತಿಲ್ಲಾ.ಹಾಲ್ ಟಿಕೆಟ್ ಕೊಡೋದಕ್ಕೆ ದುಡ್ಡು ಕೇಳ್ತಿದ್ದಾರೆ. ದುಡ್ಡು ಕೊಟ್ಟರೆ ಯಾವುದೇ ರಶೀದಿ ಕೊಡುತ್ತಿಲ್ಲ. ಡಿಟೇನ್ ಮಾಡಿದ್ರೆ ಒಂದು ವರ್ಷ ಹಾಳಾಗುತ್ತೆ ಅಂದ್ರೂ ನನ್ನ ಕಷ್ಟ ಪ್ರಾಂಶುಪಾಲರು ಅರ್ಥ ಮಾಡಿಕೊಳ್ಳುತ್ತಿಲ್ಲ. ಒಂದು ವಾರದಿಂದ ಪ್ರಾಂಶುಪಾಲರ ಬಳಿ ಅಂಗಾಲಾಚಿ ಬೇಡಿಕೊಂಡರೂ ಅವರು ಸರಿಯಾಗಿ ಸ್ಪಂದಿಸುತ್ತಿಲ್ಲಾ. ಹೀಗಾಗಿ ನಾನು ತುಂಬಾ ನೊಂದಿದ್ದೇನೆ ನನ್ನ ಜೀವನವನ್ನ ಎಂಡ್ ಮಾಡಲು ನಿರ್ಧರಿಸಿದ್ದೇನೆ. ನನ್ನ ಸಾವಿಗೆ ಸೆಂಟ್ ಜೋಸೆಫ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಕಾರಣ ಎಂದು ವಿದ್ಯಾರ್ಥಿನಿ ತನ್ಮಯಾ ವಿಡಿಯೋ ಜತೆಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಹಾಲ್‌ ಟಿಕೇಟ್‌ ನೀಡುವಂತೆ ಒಂದು ವಾರದಿಂದ ಪ್ರಾಂಶುಪಾಲರ ಬಳಿ ಎಷ್ಟೇ ಕೇಳಿಕೊಂಡರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ನಾನು ನನ್ನ ಜೀವನವನ್ನು ಕೊನೆ ಮಾಡಲು ನಿರ್ಧರಿಸಿದ್ದೇನೆ. ನನ್ನ ಸಾವಿಗೆ ಸೆಂಟ್ ಜೋಸೆಫ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳೇ ಕಾರಣ ಎಂದು ಬ್ಲೇಡ್‍ನಿಂದ ಕೈ ಕೂಯ್ದುಕೊಂಡು ಮಾತ್ರೆ ಸೇವಿಸಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

Donate Janashakthi Media

Leave a Reply

Your email address will not be published. Required fields are marked *