ಕಿರುಕುಳಕ್ಕೆ ಬೇಸೆತ್ತು ವಿದ್ಯಾರ್ಥಿ ಆತ್ಮಹತ್ಯೆ: 4 ಶಿಕ್ಷಕರು ಅಮಾನತು

ನವದೆಹಲಿ: ದೆಹಲಿ ಮೆಟ್ರೋ ರೈಲು ನಿಲ್ದಾಣದಲ್ಲಿ ಶಿಕ್ಷಕರ ಕಿರುಕುಳದಿಂದ ಬೇಸತ್ತ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನವೆಂಬರ್‌ 18ರಂದು ನಡೆದಿದ್ದೂ, ಸಾರ್ವಜನಿಕರ ಆಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ನಾಲ್ವರು ಶಿಕ್ಷಕರನ್ನು ನವೆಂಬರ್‌ 20ರಂದು ಅಮಾನತುಗೊಳಿಸಲಾಗಿದೆ.

ವಿದ್ಯಾರ್ಥಿಯನ್ನು ಒಂದು ವರ್ಷದಿಂದೀಚೆಗೆ ಶಿಕ್ಷಕರು ನಿಂದಿಸುತ್ತಿದ್ದರು ಹಾಗೂ ಕಿರುಕುಳ ನೀಡುತ್ತಿದ್ದರು ಎಂದು ಪೋಷಕರು ಆಪಾದಿಸಿದ್ದು, ಖಿನ್ನತೆಗೆ ಒಳಗಾದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಲಹಾತಜ್ಞರು ಮತ್ತು ಶಿಕ್ಷಕರಿಗೆ ಮಾಹಿತಿ ನೀಡಿದ್ದ ಎಂದು ಕುಟುಂಬದವರು ಹೇಳಿದ್ದಾರೆ.

ಇದನ್ನೂ ಓದಿ: ಸೂರ್ಯ ಮುಳುಗದ ಕನಸಿನ ನಾಡಲ್ಲಿ “ದಾಸ್‌ ಕ್ಯಾಪಿಟಲ್”

“ನಿಮ್ಮ ವಿರುದ್ಧ ತಿಸ್ ಹಜಾರಿ ಕೋರ್ಟ್ ನಲ್ಲಿ ನ.19ರಂದು ಎಫ್ಐಆರ್ ದಾಖಲಾಗಿರುವುದು ಶಾಲೆಯ ಗಮನಕ್ಕೆ ಬಂದಿದ್ದು, ಪ್ರಕರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆರೋಪಗಳ ಗಂಭೀರತೆ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಮತ್ತು ಮುಂದಿನ ಆದೇಶದವರೆಗೆ ಅಮಾನತಿನಲ್ಲಿ ಇರುತ್ತೀರಿ” ಎಂದು ನಾಲ್ವರು ಶಿಕ್ಷಕರಿಗೆ ನೀಡಿದ ಪತ್ರದಲ್ಲಿ ವಿವರಿಸಲಾಗಿದೆ.

ವಿದ್ಯಾರ್ಥಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆತನ ಪೋಷಕರುಮತ್ತು ಸ್ನೇಹಿತರು ಅಶೋಕ ಪ್ಯಾಲೇಸ್ ನಲ್ಲಿರುವ ಶಾಲೆಯ ಹೊರಗೆ ಪ್ರತಿಭಟನೆ ನಡೆಸಿ, ಆರೋಪಿ ಶಿಕ್ಷಕರ ವಿರುದ್ಧ ಮತ್ತು ಶಾಲಾ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದರು.

ಇದನ್ನೂ ನೋಡಿ: ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೆಪಿಎಸ್ ವ್ಯವಸ್ಥೆ ಪರಿಹಾರವೋ? ಶಾಪವೋ? Janashakthi Media

Donate Janashakthi Media

Leave a Reply

Your email address will not be published. Required fields are marked *