ಧಾರವಾಡ| ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಿದ್ಯಾರ್ಥಿ ಮುಖಂಡರು ಪೊಲೀಸ್ ವಶಕ್ಕೆ

ಧಾರವಾಡ: ಏಪ್ರಿಲ್‌ 14ರಂದು ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ, ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಗೆ ಆಗಮಿಸಿದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ವಿದ್ಯಾರ್ಥಿ ಮುಖಂಡರು ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಧಾರವಾಡದ ಜಯನಗರ ವೃತ್ತದ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಹೋಗಿ ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ: ಟಿಕೆಟ್ ಇದ್ದರೂ ವಿಮಾನ ಏರಲು ನಿರಾಕರಣೆ; ಏರ್‌ಲೈನ್ಸ್‌ ಅಧಿಕಾರಿ ವಿರುದ್ದ ಎಫ್‌ಐಆರ್

ಮುಖಂಡರಾದ ಯಲ್ಲಪ್ಪ ಹೆಗಡೆ, ನಾಗರಾಜ್ ಚಲವಾದಿ ಚಾಣಕ್ಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ರಾಜ್ಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆ ನಡೆಯುತ್ತಿದೆ 2.84 ಲಕ್ಷ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.

ಕಳೆದ ಕೆಲವು ದಿನಗಳ ಹಿಂದೆ ಕೂಡ ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆದಿತ್ತು. ಈ ವೇಳೆ ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದಾಗ ಪ್ರತಿಭಟನೆ ಕೈಬಿಟ್ಟಿದ್ದರು. ಆದರೆ ಇದೀಗ ಮತ್ತೆ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇದನ್ನೂ ನೋಡಿ: ಶಿಕ್ಷಣ ಮೌಲ್ಯಕೇಂದ್ರಿತವಾಗದೇ ಹಣಕೇಂದ್ರಿತವಾಗಿದೆ: ರವಿಕುಮಾರ್ ಬಾಗಿ Janashakthi Media

Donate Janashakthi Media

Leave a Reply

Your email address will not be published. Required fields are marked *