ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ: ಸಬ್ ರಿಜಿಸ್ಟ್ರಾರ್; ಬಾಂಡ್ ರೈಟರ್ ಬಂಧನ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಹುಕ್ಕೇರಿ ಪೊಲೀಸರು ಸಬ್ ರಿಜಿಸ್ಟ್ರಾರ್ ಮತ್ತು ಬಾಂಡ್ ರೈಟರ್’ನ್ನು ಪೊಲೀಸರು ಬಂಧಿಸಿದ ಘಟನೆ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ನಡದಿದೆ. ಸಬ್ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ (34) ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ (35) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿರು 2.1 ಎಕರೆ ಜಮೀನಿಗೆ ಬಂಧಿತರು ನಕಲಿ ದಾಖಲೆ ಸೃಷ್ಟಿಸಿ ಹುಕ್ಕೇರಿ ಉಪನೋಂದಣಿ ಕಚೇರಿಯಲ್ಲಿ ಬೇರೆ ವ್ಯಕ್ತಿಯ ಹೆಸರಿನಲ್ಲಿ ನೋಂದಣಿ ಮಾಡಿಸಿ ಮಾರಾಟ ಮಾಡಿದ್ದರು.

ಇದನ್ನೂ ಓದಿ: ಯುಜಿಸಿ – ಸಮಾನತೆಯನ್ನು ಉತ್ತೇಜಸುವ ನಿಯಮ 2026

ಈ ಅಕ್ರಮಕ್ಕೆ ಉಪನೋಂದಣಿ ಅಧಿಕಾರಿ ಸೇರಿ ಹಲವರು ಭಾಗಿಯಾಗಿರುವ ಕುರಿತು ಕುರಣಿವಾಡಿ ಗ್ರಾಮದ ಶಿವಾನಂದ ಮಾನಗಾಂವಿ ಎಂಬುವವರು ಹುಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದೇ ಪ್ರಕರಣದ ಅಡಿಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದರು. ಆದರೆ, ಉಪ ನೋಂದಣಿ ಅಧಿಕಾರಿ, ಬಾಂಡ್ ರೈಟರ್ ಇಬ್ಬರು ಪರಾರಿಯಾಗಿ ಜಾಮೀನಿಗೆ ಅರ್ಜಿ ಹಾಕಿದ್ದರು. ಭಾನುವಾರ ಇಬ್ಬರಿಗೆ ನ್ಯಾಯಾಲಯ ಮಂಜೂರು ಮಾಡಿತ್ತು.

ಬಳಿಕ ಪೊಲೀಸ್ ಠಾಣೆಗೆ ಇಬ್ಬರು ಹಾಜರಾಗಿ ಜಾಮೀನು ಪಡೆಯುವ ಸಂದರ್ಭದಲ್ಲಿ ಪೊಲೀಸರು ಮತ್ತೊಂದು ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿರುವ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಬಳಿಕ ನ್ಯಾಯಾಲಯವು ಇಬ್ಬರನ್ನು ಗೋಕಾಕ ಸಬ್ ಜೈಲಿಗೆ ಕಳುಹಿಸಿ ವಿಚಾರಣೆ ಮುಂದೂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ನೋಡಿ: ಫೆ12ರ ಮುಷ್ಕರ | ಕೃಷಿ ರೈತರದ್ದು, ಕಾರ್ಪರೇಟ್‌ ಕಂಪನಿಗಳದ್ದು ಅಲ್ಲ | ಸಿದ್ಧನಗೌಡ ಪಾಟೀಲ್‌ | ಗುರುರಾಜ ದೇಸಾಯಿ

Donate Janashakthi Media

Leave a Reply

Your email address will not be published. Required fields are marked *