ಕಾರ್ಮಿಕ ಕಾನೂನು ವಿರೋಧಿಸಿ ಪ್ರತಿಭಟನೆ

ಸಂಡೂರು: ಕಾರ್ಮಿಕರ ಕಾನೂನುಗಳಲ್ಲಿ ಮಾಲೀಕರ ಪರವಾದ ತಿದ್ದುಪಡಿಗಳನ್ನು ವಿರೋಧಿಸುವುದು, ಸಂಘದ ಹಕ್ಕು, ಮುಷ್ಕರದ ಹಕ್ಕನ್ನು ಕಸಿಯುವ ಕಾರ್ಮಿಕ ಸಂಹಿತೆಗಳ ನಿಷೇಧಿಸುವಂತೆ ಒತ್ತಾಯಿಸಿ ಸಿಐಟಿಯು, ಅಂಗನವಾಡಿ ನೌಕರರ ಸಂಘದ ಮುಖಂಡರು ಜುಣ್‌ 25 ಬುಧವಾರದಂದು ಸಹಿ ಸಂಗ್ರಹ ಚಳುವಳಿಯ ಮನವಿಯನ್ನು ಸಂಡೂರಿನ ಕಾರ್ಮಿಕ ಇಲಾಖೆಯ ಅಧಿಕಾರಿ ಪರಶುರಾಮ ಮೂಲಕ ರಾಜ್ಯದ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ರವಾನಿಸಿದರು. ಅಧಿಕಾರಿ

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಜೆ.ಎಂ.ಚೆನ್ನಬಸಯ್ಯ ಸ್ವಾಮಿ ಮಾತನಾಡಿ, ‘ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡಬೇಕು. ಮಹಿಳೆಯರಿಗೆ ರಾತ್ರಿ ಪಾಳೆಯ. ಅಪಾಯದ ಕೆಲಸ ನೀಡಬಾರದು. 1948ರ ಕರ್ನಾಟಕ ಕಾರ್ಖಾನೆಗಳ ಕಾಯ್ದೆಯನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ದಿನಕ್ಕೆ ಎಂಟು ಗಂಟೆಯ ಕೆಲಸ ನೀಡಬೇಕು’ ಎಂದು ಒತ್ತಾಯಿಸಿದರು.

ಇದನ್ನೂ ನೋಡಿ: ಅನ್ನದಾತರನ್ನು ಬಂಧಿಸಿದ ಸಿದ್ದರಾಮಯ್ಯ ಸರ್ಕಾರ ; ನಾಳೆ ಸಿಎಂ ಮನೆಗೆ ಮುತ್ತಿಗೆ – ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಕೇಂದ್ರದ ಬಿಜೆಪಿ ಸರ್ಕಾರವು ಶ್ರೀಮಂತರಿಗೆ, ಕಾರ್ಪೋರೇಟ್ ಕಂಪನಿಗಳ ತೆರಿಗೆ ವಿನಾಯಿತಿ ನೀಡುತ್ತದೆ. ಇದಲ್ಲದೇ, ಸಾಲ ಮನ್ನಾ ಕೂಡ ಮಾಡಿದೆ. ಇದು ಸರಿಯಲ್ಲ. ದೇಶ ಕಟ್ಟುವ, ದುಡಿಯುವ ಬಡ ಜನರಿಗೆ ಸರ್ಕಾರವು ಮೂಲ ಸೌಲಭ್ಯಗಳನ್ನು ಕಲ್ಪಿಸಲು ಮೊದಲು ಆದ್ಯತೆ ನೀಡಬೇಕು’ ಎಂದು ಒತ್ತಾಯಿಸಿದರು.

ಸಂಡೂರು ತಾಲ್ಲೂಕಿನ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ಖಾಜಾಬನ್ನಿ, ಕಾರ್ಯದರ್ಶಿ ರೇಖಾ, ಖಜಾಂಜಿ ವಿ.ನಾಗರತ್ನ, ಮುಖಂಡರಾದ ಮಲ್ಲಿಕಾರ್ಜುನ, ಕೃಷ್ಣವೇಣಿ, ಚಂದ್ರ, ನೇತ್ರ, ಚೆನ್ನಮ್ಮ, ಮುದ್ದಮ್ಮ, ರೇಣುಕಾ, ದೊಡ್ಡಮ್ಮ ಪಾಲ್ಗೊಂಡಿದ್ದರು.

ಇದನ್ನೂ ನೋಡಿ: 50 ವರ್ಷ| ಆಂತರಿಕ ತುರ್ತುಪರಿಸ್ಥಿತಿಯ ಕರಾಳ ದಿನಗಳು | 25 ಜೂನ್‌ 1975

Donate Janashakthi Media

Leave a Reply

Your email address will not be published. Required fields are marked *