ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ

ಬೆಂಗಳೂರು: ನೇರಳೆ ಮಾರ್ಗದ ನಮ್ಮ ಮೆಟ್ರೋದಲ್ಲಿ ಏಕಾಏಕಿ ತಾಂತ್ರಿಕ ಸಮಸ್ಯೆ ಉಂಟಾಗಿ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಕೆಂಗೇರಿಯಿಂದ ಬೈಯಪ್ಪನಹಳ್ಳಿ ಮಾರ್ಗದ ಕಡೆಗೆ ಹೊರಡುವ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು. ಇದರಿಂದ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಾಂತ್ರಿಕ ಸಮಸ್ಯೆಯಿಂದ ನಮ್ಮ ಮೆಟ್ರೋ ಸ್ಥಗಿತಗೊಂಡಿದೆ ಎಂದು ಅಲ್ಲಿನ ಸಿಬ್ಬಂದಿಗಳ ಹೇಳಿದರು.

ಇದನ್ನೂ ಓದಿ:ಬೆಂಗಳೂರು : ನೀರು ನಿಲ್ದಾಣವಾಯ್ತು ಪ್ರಧಾನಿ ಮೋದಿ ಉದ್ಘಾಟಿಸಿದ ಮೆಟ್ರೋ ನಿಲ್ದಾಣ

ಬೆಳಗ್ಗೆ ಸುಮಾರು 9:00 ಗಂಟೆಗೆ ಈ ಸಮಸ್ಯೆ ಉಂಟಾಗಿದ್ದು ಮೆಟ್ರೋ ಅವಲಂಬಿಸಿರುವ ಅನೇಕರಿಗೆ ತೊಂದರೆಯುಂಟಾಗಿದೆ. ಇಂದು ಶಾಲಾ- ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಮತ್ತು ತಮ್ಮ ತಮ್ಮ ಆಫೀಸ್ ಕೆಲಸಗಳಿಗೆ ಹೋಗುವ ಹಲವಾರು ಜನರಿಗೆ ತೊಂದರೆಯಾಗಿದೆ. ನೇರಳೆ ಮಾರ್ಗದ ಕೆಂಗೇರಿಯಿಂದ ಬೈಯಪ್ಪನಹಳ್ಳಿ ಕಡೆಗೆ ಆಫೀಸ್‌ ಕೆಲಸಕ್ಕೆ  ಹೊರಟಿರುವ ಪ್ರಯಾಣಿಕರೆಲ್ಲಾ ಮೆಟ್ರೋಗಾಗಿ ಕಾಯುತ್ತಾ ಕುಳಿತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *