ಚಿಕ್ಕೋಡಿ | ಜಿಲ್ಲಾಧಿಕಾರಿಗಳ ಸಂಧಾನ ಸಭೆ ವಿಫಲ : ಪ್ರತಿಭಟನೆ ಮುಂದುವರಿಸಿದ ಕಬ್ಬು ಬೆಳೆಗಾರರು

ಚಿಕ್ಕೋಡಿ : ಕಳೆದ ನಾಲ್ಕು ದಿನಗಳಿಂದ ರೈತರು ಗುರ್ಲಾಪುರ್ ಕ್ರಾಸ್​ನಲ್ಲಿ ಸಕ್ಕರೆ ಕಾರ್ಖಾನೆಗಳಿಂದ 3,500 ರೂ. ದರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಪ್ರತಿಭಟನಾ ಸ್ಥಳಕ್ಕಾಗಮಿಸಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಎಸ್​ಪಿ ಅವರ ನೇತೃತ್ವದಲ್ಲಿ ಹೋರಾಟಗಾರರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಚಿಕ್ಕೋಡಿ

ಇದನ್ನೂ ಓದಿ : ಅಮರಾವತಿ | ಮೊಂಥಾ ಚಂಡಮಾರುತ :ಆಂಧ್ರ, ಒಡಿಶಾ ತತ್ತರ ಜಾರ್ಖಂಡ್‌ಗೂ ಎಚ್ಚರ

ಈ ಕುರಿತಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿದ್ದು, ರೈತರು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೃಹತ್ ಹೋರಾಟ ಮಾಡಿಕೊಂಡು ಬಂದಿದ್ದಾರೆ. ರೈತರ ಏಳಿಗೆಗಾಗಿ ನಾನು ಶ್ರಮಿಸುತ್ತೇನೆ. ಕಾರ್ಖಾನೆ ಮಾಲೀಕರ ಜೊತೆಗೆ ಸಭೆ ನಡೆಸಲಾಗಿತ್ತು. ಆದರೆ ಕಾರ್ಖಾನೆ ಮಾಲೀಕರು 3,200 ರೂ. ಕೊಡುವುದಾಗಿ ಒಪ್ಪಿಕೊಂಡಿದ್ದಾರೆ. ನಿಮ್ಮ ಜೊತೆ ನಾನು ನಿರಂತರವಾಗಿ ಇರುತ್ತೇನೆ. ನಿಮ್ಮ ಬೇಡಿಕೆಗೆ ನಾನು ಸ್ಪಂದನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ರೈತರು ಬೀದಿಯಲ್ಲಿ ಕೂರಬಾರದು. ನಾನು ರೈತ ಸ್ನೇಹಿ ಅಧಿಕಾರಿಯಾಗಿ ನಿಮಗೆ ಮನವಿ ಮಾಡಿಕೊಳ್ಳುತ್ತೇನೆ. ನೀವು ಈ ಪ್ರತಿಭಟನೆಯನ್ನು ಕೈ ಬಿಡಿ, ನಾನು ನಿಮ್ಮ ಜೊತೆ ಇರುತ್ತೇನೆ ಎಂದು ಮನವೊಲಿಸಲು ಪ್ರಯತ್ನಿಸಿದರು. ಚಿಕ್ಕೋಡಿ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಎನ್ನದೆ ಬೃಹತ್ ಪ್ರಮಾಣದ ಕಬ್ಬು ಬೆಳೆಗಾರರ ಹೋರಾಟ ನಡೆಯುತ್ತಿದೆ. ಹೀಗಾಗಿ ನಿನ್ನೆ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಮತ್ತು ಎಸ್​ಪಿ ಭೀಮಾಶಂಕರ್ ಗುಳೇದ್ ರೈತರು ಹಾಗೂ ರೈತ ಮುಖಂಡರ ಜೊತೆ ಸಂಧಾನ ಸಭೆ ನಡೆಸಿದರು.

ಬೆಳಗಾವಿಯಲ್ಲಿ ರೈತರ ಹೋರಾಟಕ್ಕೆ ಜಿಲ್ಲಾಡಳಿತ ಸ್ಪಂದನೆ ನೀಡಿದೆ, ನೀವು ಈ ಪ್ರತಿಭಟನೆಯನ್ನು ಕೈ ಬಿಡಬೇಕೆಂದು ರೈತರಿಗೆ ಡಿಸಿ ಮನವಿ ಮಾಡಿದರು. ಈ ಹಿಂದೆ ಕೂಡ ತೂಕದಲ್ಲಿ ಕೆಲವು ಕಾರ್ಖಾನೆಗಳು ಮೋಸ ಮಾಡುತ್ತವೆ ಎಂದು ರೈತ ಮುಖಂಡ ಚುನ್ನಪ್ಪ ಪೂಜಾರಿ ನನಗೆ ವಿಸ್ತೃತವಾಗಿ ಮಾಹಿತಿ ನೀಡಿದ್ದರು. ತಕ್ಷಣವೇ ನಾನು ಜಿಲ್ಲಾಡಳಿತದಿಂದ ಓರ್ವ ಅಧಿಕಾರಿಯನ್ನು ನೇಮಿಸಿ ತೂಕದ ಮಷಿನ್​ಗಳನ್ನು ಪರಿಶೀಲನೆ ಮಾಡಿಸಿದ್ದೆ ಎಂದರು.

ನಮ್ಮ ಬೇಡಿಕೆ 3,500 ರೂ. ಆಸುಪಾಸಿನವರೆಗೆ ಇದೆ. ಪ್ರತಿ ಟನ್ ಕಬ್ಬಿಗೆ ದರ ನಿಗದಿ ಮಾಡುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ನಾಳೆ ಎರಡು ಲಕ್ಷ ಜನ ಸೇರುತ್ತಾರೆ. ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನ ಅದಷ್ಟು ಬೇಗನೆ ನಮಗೆ ಸಿಹಿ ಸುದ್ದಿ ನೀಡಿ. ನಿಮ್ಮ ಜಿಲ್ಲಾಧಿಕಾರಿಗಳ ಸರ್ವೋಚ್ಛ ಅಧಿಕಾರ ಬಳಸಿ ಕಾರ್ಖಾನೆ ಮಾಲೀಕರ ಜೊತೆ ಮಾತನಾಡಿ, ನಮಗೆ ನ್ಯಾಯ ಒದಗಿಸಿಕೊಡಬೇಕು. ಈ ಪ್ರತಿಭಟನೆಯನ್ನು ಇಲ್ಲಿಗೆ ಕೈ ಬಿಡೋದಿಲ್ಲ, ನಮಗೆ ನ್ಯಾಯಯುತವಾದ ಬೆಲೆ ನಿಗದಿಪಡಿಸುವವರೆಗೆ ಈ ಹೋರಾಟ ಮುಂದುವರಿಯುತ್ತದೆ ಎಂದು ತಿಳಿಸಿದರು.

ಇದನ್ನೂ ನೋಡಿ : ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ.. || Janashakthi Media

 

Donate Janashakthi Media

Leave a Reply

Your email address will not be published. Required fields are marked *