ಮಂಡ್ಯ ಕ್ಷೇತ್ರ: ಸಮಲತಾ – ಕುಮಾರಸ್ವಾಮಿ ಮಹತ್ವದ ಮಾತುಕತೆ?

ಬೆಂಗಳೂರು :ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅವರನ್ನ ಭಾನುವಾರ ಭೇಟಿ ಮಾಡಿ ಚುನಾವಣೆಗೆ ಸಹಕಾರ ನೀಡುವಂತೆ ಕೋರಿದ್ದಾರೆ.

ಜೆಪಿ ನಗರದ ನಿವಾಸದಲ್ಲಿ ನಡೆದ ಭೇಟಿ ವೇಳೆ ಸುಮಲತಾ ಅವರ ಪುತ್ರ ಅಭಿಷೇಕ್ ಅವರು ಹಾಜರಿದ್ದರು. ಕೆಲ ಹೊತ್ತು ಮಾತುಕತೆ ನಡೆಸಿದ್ದು, ಸುಮಲತಾ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವ ತೀವ್ರ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ಸುಮಲತಾ ಅವರಿಗೆ ಮತ್ತೊಮ್ಮೆ ಮಂಡ್ಯ ಲೋಕಸಭಾ ಕ್ಷೇತದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಅಭಿಮಾನಿಗಳು ಒತ್ತಾಯಿಸಿದ್ದಾರೆ. ಸುಮಲತಾ ಅವರ ಜೆಪಿ ನಗರದ ನಿವಾಸದ ಮುಂದೆ ಶನಿವಾರ ನೂರಾರು ಅಭಿಮಾನಿಗಳು ಜಮಾಯಿಸಿದ್ದರು.

ಪ್ರಮುಖ ಬೆಂಬಲಿಗರೊಂದಿಗೆ ಚರ್ಚೆ ನಡೆಸಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಸಂಸದೆ ಸುಮಲತಾ, ‘ನಿಮ್ಮನ್ನ ನೋಯಿಸುವ ನಿರ್ಧಾರ ನಾನು ತೆಗೆದುಕೊಳ್ಳುವುದಿಲ್ಲ. ಏಪ್ರಿಲ್​ 3ರಂದು ಮಂಡ್ಯದಲ್ಲಿ ಸಭೆ ಮಾಡಿ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಕುತೂಹಲ ಉಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *